i
ಮತದಾನದ ಮೂಲಕ ಪ್ರಜಾಪ್ರಭುತ್ವ ಸಧೃಡಗೊಳಿಸಿ- ಇಒ ಅನಂತರಾಜು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: Strengthen democracy through voting – EO Anantaraju…
ಅರ್ಹ ಮತದಾರರು ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವವನ್ನು ಸಧೃಡಗೊಳಿಸಬೇಕು ಎಂದು ಚಿತ್ರದುರ್ಗ ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ತಾ.ಪಂ ಇಒ ಅನಂತರಾಜು ಹೇಳಿದರು.
ಚಿತ್ರದುರ್ಗ ತಾಲ್ಲೂಕಿನ ಭರಮಸಾಗರ ಗ್ರಾಮದ ಹಳೇ ಬಸ್ ನಿಲ್ದಾಣ ವೃತ್ತದಲ್ಲಿ ಬುಧವಾರ ಮುಂಜಾನೆ ನಡೆದ ಮತದಾನ ಜಾಗೃತಿ ಜಾಥಾದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಬರುವ ಏಪ್ರಿಲ್ 26 ರಂದು ಮತದಾನ ನಡೆಯಲಿದೆ. 18 ವರ್ಷ ಮೇಲ್ಪಟ್ಟ ಪುರುಷರು, ಮಹಿಳೆಯರು, ಹಿರಿಯ ನಾಗರೀಕರು, ಅಂಗವಿಕಲರು, ತೃತೀಯ ಲಿಂಗಿಗಳು ಯಾವುದೇ ಬೇಧ ಭಾವಗಳಿಲ್ಲದೆ ಮತಗಟ್ಟೆಗೆ ತೆರಳಿ ತಪ್ಪದೇ ಮತದಾನ ಮಾಡಬೇಕು. ಪ್ರಜಾಪ್ರಭುತ್ವದ ಗಟ್ಟಿಯಾಗಬೇಕಾದರೆ ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ಮತ ಚಲಾಯಿಸಬೇಕು. ಚುನಾವಣಾ ಆಯೋಗದಿಂದ ಮತದಾನಕ್ಕೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಯಾವುದೇ ಭಯ, ಭೀತಿ ಇಲ್ಲದೆ ನಿರ್ಭೀತರಾಗಿ ಮತಚಲಾಯಿಸಿ. ಅರ್ಹ ಮತದಾರರು ಮತದಾನದಿಂದ ಯಾವುದೇ ಕಾರಣಕ್ಕೂ ಹೊರಗುಳಿಯಬಾರದು ಎಂದು ಹೇಳಿದರು.
ಅಮೂಲ್ಯವಾದ ಮತ ಚಲಾಯಿಸಿ, ಉತ್ತಮ ವ್ಯಕ್ತಿಯನ್ನು ಆಯ್ಕೆ ಮಾಡಬಹುದು. ನಿಮ್ಮ ಪ್ರತಿಯೊಂದು ಮತ ದೇಶ ನಿರ್ಮಾಣ ಮಾಡವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ತಾ.ಪಂ.ಇಒ ಅನಂತರಾಜು ಅಭಿಪ್ರಾಯ ಪಟ್ಟರು. ಇದೇ ವೇಳೆ ನೆರೆದಿದ್ದ ಸಾರ್ವಜನಿಕರಿಗೆ ಮತದಾನ ಪ್ರತಿಜ್ಞೆ ಬೋಧಿಸಲಾಯಿತು.
ಜಾಗೃತಿ ಕಾರ್ಯಕ್ರಮದಲ್ಲಿ ಭರಮಸಾಗರ ಗ್ರಾಮದ ಪಿ.ಡಿ.ಓ, ಸಿಬ್ಬಂದಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಸ್ತ್ರೀ ಶಕ್ತಿ ಸಂಘಗಳ ಮಹಿಳಾ ಸದಸ್ಯರು ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.