i
ಮತಗಟ್ಟೆ ಸಿಬ್ಬಂದಿಗೆ ಬಸ್ ವ್ಯವಸ್ಥೆ-ಜಿಲ್ಲಾಧಿಕಾರಿ ವೆಂಕಟೇಶ್…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಅಂಗವಾಗಿ ಇದೇ ಏಪ್ರಿಲ್ 20ರಂದು ಮತಗಟ್ಟೆ ಸಿಬ್ಬಂದಿಗೆ ಎರಡನೇ ಹಂತದ ಚುನಾವಣೆ ತರಬೇತಿ ಆಯೋಜಿಸಲಾಗಿದೆ. ಈ ತರಬೇತಿಗೆ ಒಂದು ತಾಲ್ಲೂಕು ಕೇಂದ್ರದಿಂದ, ಇನ್ನೊಂದು ತಾಲ್ಲೂಕು ಕೇಂದ್ರಕ್ಕೆ ತೆರಳುವ ಮತಗಟ್ಟೆ ಸಿಬ್ಬಂದಿಗೆ 71 ಕೆ.ಎಸ್.ಆರ್.ಟಿ.ಸಿ ಬಸ್ಗಳ ವ್ಯವಸ್ಥೆ ಮಾಡಲಾಗಿದೆ.
ಚಿತ್ರದುರ್ಗ ನಗರದ ಪ್ರವಾಸಿ ಮಂದಿರದ ಎದುರಿನ ಹಳೇ ಮಾಧ್ಯಮಿಕ ಶಾಲಾ ಆವರಣ, ಚಳ್ಳಕೆರೆ ನಗರದ ಚಿತ್ರದುರ್ಗ ರಸ್ತೆಯಲ್ಲಿನ ಹೆಚ್.ಪಿ.ಪಿ.ಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣ, ಹಿರಿಯೂರು ನಗರ ಹಾಗೂ ಹೊಳಲ್ಕೆರೆ ಪಟ್ಟಣದ ತಾಲ್ಲೂಕು ಕಚೇರಿ ಆವರಣ, ಮೊಳಕಾಲ್ಮೂರು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಹೊಸದುರ್ಗ ಪಟ್ಟಣದ ಶ್ರೀಮತಿ ತಾಯಮ್ಮ ಎಡೆತೊರೆ ಸಿದ್ದಿವಾಲ್ ಲಿಂಗಯ್ಯ ಪದವಿ ಪೂರ್ವ ಕಾಲೇಜು ಆವರಣದಿಂದ ತರಬೇತಿಗೆ ವಾಹನಗಳು ಮುಂಜಾನೆ 6 ಗಂಟೆಯಿಂದಲೇ ಹೊರಡಲಿವೆ. ತರಬೇತಿ ಪ್ರಕ್ರಿಯೆ ಮುಗಿದ ನಂತರ ಮರಳಿ ಸ್ವ ಸ್ಥಾನಕ್ಕೆ ವಾಪಸ್ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ.
ತರಬೇತಿಗೆ ಹೊರಡುವ ಬಸ್ಗಳ ಮಾರ್ಗ ಹಾಗೂ ನಾಮಫಲಕಗಳ ನಿರ್ವಹಣೆಗಾಗಿ ಚಿತ್ರದುರ್ಗ ತಾಲ್ಲೂಕಿಗೆ ಸಂಬಂಧಿಸಿದಂತೆ ಹಿರಿಯ ಮೋಟಾರು ವಾಹನ ನಿರೀಕ್ಷಕ ಪಿ.ಎಂ.ಶಾನುಬೋಗ್ (ಮೊ:9972594412) ಹಾಗೂ ವಾಹನ ನಿರೀಕ್ಷಕ ರಾಜೇಶ್ (ಮೊ:9980323230), ಹಿರಿಯೂರು ತಾಲ್ಲೂಕಿಗೆ ಸಂಬಂಧಿಸಿದಂತೆ ಹಿರಿಯ ಮೋಟಾರು ವಾಹನ ನಿರೀಕ್ಷಕ ಮಹಂತೇಶ್ (ಮೊ:7483627424), ಹೊಸದುರ್ಗ ಮತ್ತು ಹೊಳಲ್ಕೆರೆ ತಾಲ್ಲೂಕಿಗೆ ಸಂಬಂಧಿಸಿದಂತೆ ಮೋಟಾರು ವಾಹನ ನಿರೀಕ್ಷಕ ಟಿ.ಎಂ.ಪ್ರಕಾಶ್ (ಮೊ:8217330331), ಚಳ್ಳಕೆರೆ ಮತ್ತು ಮೊಳಕಾಲ್ಮೂರು ತಾಲ್ಲೂಕಿಗೆ ಸಂಬಂಧಿಸಿದಂತೆ ಮೋಟಾರು ವಾಹನ ನಿರೀಕ್ಷಕ ಹೆಚ್.ಬಿ.ನದಾಫ್ (ಮೊ:9535554705) ಅವರನ್ನು ನೇಮಿಸಲಾಗಿದೆ. ಕೆ.ಎಸ್.ಆರ್.ಟಿ.ಸಿ ಬಸ್ಗಳ ನಿಯೋಜನೆಯಲ್ಲಿ ಯಾವುದೇ ತೊಂದರೆ ಉಂಟಾಗದಂತೆ ಕರ್ತವ್ಯ ನಿರ್ವಹಿಸಲು ಚಿತ್ರದುರ್ಗ ವಿಭಾಗೀಯ ಸಂಚಲನಾಧಿಕಾರಿ ಜಿ.ಸುರೇಶ್ (ಮೊ:9606908962) ನಿಯೋಜಿಸಲಾಗಿದೆ.
ತರಬೇತಿಗೆ ನಿಯೋಜಿಸಲಾದ ಎಲ್ಲಾ ಇಲಾಖೆಗಳ ಸಿಬ್ಬಂದಿ ತಪ್ಪದೇ ಸರಿಯಾದ ಸಮಯಕ್ಕೆ ಚುನಾವಣಾ ತರಬೇತಿ ಕಾರ್ಯಕ್ಕೆ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.