i
ಲಾರಿ ಡಿಕ್ಕಿ, ಜನಶತಾಬ್ದಿ ಸೇರಿ 2 ರೈಲು ಎರಡು ಗಂಟೆ ವಿಳಂಬ…
ಚಂದ್ರವಳ್ಳಿ ನ್ಯೂಸ್, ಭದ್ರಾವತಿ:
ರೈಲ್ವೆ ಅಂಡರ್ಪಾಸ್ನಲ್ಲಿ ಲಾರಿ ಅಪಘಾತ ಸಂಭವಿಸಿ ಹಳಿಗಳು ಏರುಪೇರಾಗಿದ್ದರಿಂದ ಎರಡು ರೈಲುಗಳು ಸುಮಾರು ಎರಡು ಗಂಟೆ ತಡವಾಗಿ ಸಂಚಾರ ಆರಂಭಿಸಿವೆ.
ಭದ್ರಾವತಿ ಪಟ್ಟಣದ ರೈಲ್ವೆ ಅಂಡರ್ಪಾಸ್ಮುಂದೆ ನಿಗದಿಗಿಂತಲೂ ಎತ್ತರದ ವಾಹನಗಳು ಸಂಚರಿಸದಂತೆ ತಡೆಯಲು ಕಬ್ಬಿಣದ ಬ್ಯಾರಿಕೇಡ್ಹಾಕಲಾಗಿದೆ. ಕಳೆದ ರಾತ್ರಿ ಈ ಬ್ಯಾರಿಕೇಡ್ಗೆ ಲಾರಿ ಡಿಕ್ಕಿ ಹೊಡೆದಿದೆ. ಬ್ಯಾರಿಕೇಡ್ಮುರಿದು ರೈಲ್ವೆ ಹಳಿಗೆ ತಾಗಿತ್ತು. ಇದರಿಂದ ಹಳಿಗಳು ಎರುಪೇರಾಗಿ ತಾಂತ್ರಿಕ ದೋಷ ಉಂಟಾಗಿತ್ತು. ಕೂಡಲೆ ರೈಲ್ವೆ ಸಿಬ್ಬಂದಿ ಹಳಿ ರಿಪೇರಿ ಕಾಮಗಾರಿ ಆರಂಭಿಸಿದ್ದರು. ಇದರಿಂದ ಶಿವಮೊಗ್ಗ – ಭದ್ರಾವತಿ ನಡುವೆ ರೈಲು ಸಂಚಾರ ರದ್ದುಗೊಳಿಸಲಾಗಿತ್ತು.
ಕಾದು ಕಾದು ಹೈರಾಣಾದ ಪ್ರಯಾಣಿಕರು:
ಹಳಿ ರಿಪೇರಿ ಕಾರ್ಯದ ಹಿನ್ನೆಲೆ ಎರಡು ರೈಲುಗಳು ವಿಳಂಬವಾಗಿ ಸಂಚರಿಸುತ್ತಿವೆ. ಬೆಳಗ್ಗೆ 4.45ಕ್ಕೆ ಶಿವಮೊಗ್ಗ ತಲುಪಬೇಕಿದ್ದ ಮೈಸೂರು – ತಾಳಗುಪ್ಪ ಎಕ್ಸ್ಪ್ರೆಸ್ರೈಲು ಬೆಳಗ್ಗೆ 6.45ಕ್ಕೆ ತಲುಪಿದೆ. ಅಲ್ಲಿಯವರೆಗೂ ಈ ರೈಲು ಭದ್ರಾವತಿ ನಿಲ್ದಾಣದಲ್ಲಿ ನಿಂತಿತ್ತು.
ಶಿವಮೊಗ್ಗದಿಂದ ಬೆಳಗ್ಗೆ 5.15ಕ್ಕೆ ಹೊರಡಬೇಕಿದ್ದ ಬೆಂಗಳೂರು ಜನಶತಾಬ್ದಿ ರೈಲು ಸುಮಾರು ಬೆಳಗ್ಗೆ 6.355ಕ್ಕೆ ಹೊರಟಿದೆ. ವಿಳಂಬಕ್ಕೆ ಕಾರಣ ಗೊತ್ತಾಗದೆ ಪ್ರಯಾಣಿಕರು ಗೊಂದಲಕ್ಕೀಡಾಗಿದ್ದರು.