i
ಬಡ ಜನರ ಹಿತ ರಕ್ಷಿಸುವ ಕಾಂಗ್ರೆಸ್ ಪಕ್ಷ:ಶಾಸಕ ರಘುಮೂರ್ತಿ…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ರಾಜ್ಯದಲ್ಲಿ ಕಳೆದ ಹನ್ನೊಂದು ತಿಂಗಳಿನಿಂದ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳನ್ನು ಜಾರಿಗೊಳಿಸುವ ಮೂಲಕ ಕಡುಬಡವರ ಬದುಕಿಗೆ ಆಧಾರವಾಗಿದೆ. ಬಿಜೆಪಿ ಪಕ್ಷದಂತೆ ಸುಳ್ಳು ಆಶ್ವಾನೆಯನ್ನು ನೀಡದೆ ಜನರಿಗೆ ನೀಡಬೇಕಾದ ಸೌಲಭ್ಯಗಳನ್ನು ನೀಡಲು ನಮ್ಮ ಪಕ್ಷ ಸದಾ ಮುಂದು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಬಿ.ಎನ್.ಚಂದ್ರಪ್ಪನವರಿಗೆ ಮತ ನೀಡುವ ಮೂಲಕ ಚಿತ್ರದುರ್ಗ ಜಿಲ್ಲೆ ಸಮಗ್ರ ಅಭಿವೃದ್ದಿಗೆ ಸಹಕಾರ ನೀಡಬೇಕೆಂದು ಶಾಸಕ ಟಿ.ರಘುಮೂರ್ತಿಮನವಿ ಮಾಡಿದರು. ಅವರು, ಶನಿವಾರ ನಗರಂಗೆರೆ ಗ್ರಾಮದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ನಗರಂಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಗರಂಗೆರೆ, ಸಿದ್ದಾಪುರ, ನರಹರಿನಗರ, ಗಾನಪ್ಪನಹಟ್ಟಿ, ಲಕ್ಷ್ಮಿಪುರ, ಹೊಟ್ಟೆಪ್ಪನಹಳ್ಳಿ ಮುಂತಾದ ಗ್ರಾಮಗಳಲ್ಲಿ ಅಭ್ಯರ್ಥಿಪರ ಮತಯಾಚನೆ ಮಾಡಿದರು. ಲೋಕಸಭಾ ಚುನಾವಣೆ ಮತದಾನ ನಡೆಯಲು ಇನ್ನೂ ಕೇವಲ ಆರು ದಿನ ಬಾಕಿ ಇವೆ, ಈಗಾಗಲೇ ಕ್ಷೇತ್ರದಾದ್ಯಂತ ಎರಡು ಸುತ್ತಿನ ಪ್ರಚಾರವನ್ನು ಮುಗಿಸಿ ಮತದಾರರ ಒಲವನ್ನು ಗಳಿಸಲು ಕಾಂಗ್ರೆಸ್ ಪಕ್ಷ ಸಫಲವಾಗಿದೆ. ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅಭಿವೃದ್ದಿ ಪರ ಚಿಂತನೆಗಳನ್ನು ಮೈಗೂಡಿಸಿಕೊಂಡಿರುವ ವ್ಯಕ್ತಿ ಅವರಿಗೆ ಮತ ನೀಡಿ ಎಂದರು. ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಸಿ.ಓಬಯ್ಯ ಮಾತನಾಡಿ, ಸುಮಾರು ೧೨೦ ವರ್ಷಗಳ ಇತಿಹಾಸವಿರುವ ಏಕೈಕ ಪಕ್ಷ ಕಾಂಗ್ರೆಸ್ ಪಕ್ಷ. ಇಂದಿರಾಗಾಂಧಿಯವರ ಗರೀಭಿ ಹಠಾವೋ ದೇಶದಲ್ಲಿ ಬಡತನ ನಿರ್ಮೂಲನೆಗೆ ನಾಂದಿಯಾಯಿತು. ಕಾಂಗ್ರೆಸ್ ಪಕ್ಷ ಮಾಡಿದ ಯಾವುದೇ ಅಭಿವೃದ್ದಿ ಕಾರ್ಯವನ್ನು ಬಿಜಪಿ ಇಂದಿಗೂ ಮಾಡಿಲ್ಲ. ಸುಳ್ಳು ಪ್ರಚಾರಕ್ಕೆ ಜನರು ಮರುಳಾಗದೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಎಂದು ಮನವಿ ಮಾಡಿದರು. ಹಿರಿಯ ಕಾಂಗ್ರೆಸ್ ಮುಖಂಡ ಟಿ.ಪ್ರಭುದೇವ್, ಕೆಎಂಎಫ್ ನಿರ್ದೇಶಕ ಸಿ.ವೀರಭದ್ರಬಾಬು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಬಿ.ಪಿ.ಪ್ರಕಾಶ್ಮೂರ್ತಿ, ಟಿ.ರವಿಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಗದ್ದಿಗೆತಿಪ್ಪೇಸ್ವಾಮಿ, ಟಿ.ಗಿರಿಯಪ್ಪ, ಸಮರ್ಥರಾಯ, ಮೈಲಾರಪ್ಪ, ಗ್ರಾಮ ಪಂಚಾಯಿತಿ ಸದಸ್ಯರಾದ ಎಂ.ಕುಮಾರಸ್ವಾಮಿ, ಅಂಗಡಿರಮೇಶ್, ಎಂ.ಹಿದಾಯಿತ್ವುಲ್ಲಾ, ಎನ್.ಮಂಜುನಾಥ, ತಿಪ್ಪೇರುದ್ರಪ್ಪ, ಜಯಕುಮಾರ್, ಒ.ರಂಗಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ವೀರಭದ್ರಪ್ಪ, ಸಿದ್ದಾಪುರಮಂಜುನಾಥ, ಮೈನಾಬಾಬು, ದ್ಯಾವರನಹಳ್ಳಿತಿಪ್ಪೇಸ್ವಾಮಿ, ಶೈಲಜಾ ಮಂಜುನಾಥ ಮುಂತಾದವರು ಉಪಸ್ಥಿತರಿದ್ದರು.