![](https://www.chandravallinews.com/wp-content/uploads/2024/04/WhatsApp-Image-2023-04-06-at-9.25.56-AM.jpeg)
i
ಗೋವಿಂದ ಕಾರಜೋಳ ಗೆಲುವು ನಿಶ್ಚಿತ, ಕೇಂದ್ರದಲ್ಲಿ ಜಲಸಂಪನ್ಮೂಲ ಮಂತ್ರಿ ಆಗಲಿದ್ದು ಹೆಚ್ಚಿನ ಮತಗಳಿಂದ ಗೆಲ್ಲಿಸಿ-ರವೀಂದ್ರಪ್ಪ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ದೇಶದ ಸುಭದ್ರತೆ ಹಾಗೂ ಅಭಿವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಸುವ ನಿಟ್ಟಿನಲ್ಲಿ ಕೇಂದ್ರದಲ್ಲಿ ಮಂತ್ರಿಯಾಗಲಿರವ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳಗೆ ಮತ ನೀಡಿ ಎಂದು ಜೆಡಿಎಸ್ ಮುಖಂಡ ಎಂ.ರವೀಂದ್ರಪ್ಪ ಮತದಾರರಿಗೆ ಕರೆ ನೀಡಿದರು.ತಾಲೂಕಿನ ವಾಣಿವಿಲಾಸಪುರ, ಲಕ್ಕವ್ವನಹಳ್ಳಿ, ಬಳಘಟ್ಟ, ಭರಮಗಿರಿ, ಕೂನಿಕೆರೆ ಕ್ಯಾತೆದೇವರಹಟ್ಟಿ, ದೊಡ್ಡಘಟ್ಟ, ಗೊಲ್ಲರಹಟ್ಟಿಗಳು ಸೇರಿದಂತೆ ವಿವಿಧ ಭಾಗಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮುಖಂಡರ ಜೊತೆ ಮತಪ್ರಚಾರ ಕೈಗೊಂಡು ಮಾತನಾಡಿದರು.ಕೇಂದ್ರದಲ್ಲಿ ಎನ್.ಡಿ.ಎ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಮತ್ತು ರೈತರ ನೀರಾವರಿ ಸೌಲಭ್ಯ ಪಡೆಯುವುದರ ಜೊತೆಗೆ ದೇಶದ ರಕ್ಷಣೆ, ರಾಜ್ಯದ ಜನರು ನೆಮ್ಮದಿ ಜೀವನ ಸಾಗಿಸಲು ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಕೃಷಿ ಸಚಿವರಾಗಲಿದ್ದು, ಚಿತ್ರದುರ್ಗದ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರು ಜಲಸಂಪನ್ಮೂಲ ಸಚಿವರಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮತದಾರರು ಮೈತ್ರಿ ಅಭ್ಯರ್ಥಿಗೆ ಒಲವು ತೋರಿರುವ ಚಿತ್ರಣವಿದೆ. ಅದರಂತೆ ಚಿತ್ರದುರ್ಗ ಜಿಲ್ಲೆಯ ಮತದಾರರು ಹೆಚ್ಚು ಹೆಚ್ಚು ಮತಗಳನ್ನು ನೀಡುವ ಮೂಲಕ ಕಾರಜೋಳ ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಿ ಲೋಕಸಭೆಗೆ ಕಳುಹಿಸಿಕೊಡಬೇಕು ಎಂದರು.ಕಾರಜೋಳ ಅವರು ಹಿರಿಯ ಹಾಗೂ ಅನುಭವಿ ರಾಜಕಾರಣಿ. ಕೇಂದ್ರ ಸಚಿವರಾಗುವುದು ನಿಶ್ಚಿತ. ಜಿಲ್ಲೆಯ ನೀರಾವರಿ ಅಭಿವೃದ್ಧಿ, ಕೈಗಾರಿಕಾ ಅಭಿವೃದ್ಧಿ ಸೇರಿದಂತೆ ಉದ್ಯೋಗಕ್ಕೆ ಹೆಚ್ಚಿನ ಆದ್ಯತೆ ನೀಡುವ ಜೊತೆಗೆ ನೀರಾವರಿ ಸಂಪದ್ಭರಿತವಾದ ಜಿಲ್ಲೆಯನ್ನಾಗಿ ಮಾಡಲು ಪಣ ತೊಟ್ಟಿದ್ದಾರೆ. ರಾಜ್ಯದಲ್ಲಿ ಜಲಸಂಪನ್ಮೂಲ ಸಚಿವರಾಗಿದ್ದ ಸಂದರ್ಭದಲ್ಲಿ ತಾಲ್ಲೂಕಿನ ವಿವಿ ಸಾಗರ ಡ್ಯಾಂ ಎರಡನೇ ಬಾರಿಗೆ ಭರ್ತಿಯಾಗಿ ಕೋಡಿ ಬಿದ್ದ ಸಂಧರ್ಭದಲ್ಲಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ್ದರು. ಇವರ ಬದ್ಧತೆ ಮತ್ತು ಆಸಕ್ತಿಯಿಂದ ಧರ್ಮಪುರ ಕೆರೆಗೆ ನೀರು ಬಂದಿತ್ತು. ಈಗಾಗಿ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ. ಕಾರಜೋಳರವರು ಬದ್ಧತೆಯಿಂದ ಭದ್ರಾ ಹಾಗೂ ಎತ್ತಿನಹೊಳೆ ಯೋಜನೆಯಿಂದ ನಮ್ಮ ತಾಲೂಕಿನ ವಾಣಿವಿಲಾಸ ಜಲಾಶಯ, ಗಾಯಿತ್ರಿ ಜಲಾಶಯ ಹಾಗೂ ಧರ್ಮಪುರ ಕೆರೆಗೆ ಇನ್ನು ಹೆಚ್ಚು ನೀರು ಹರಿಸುವ ಸಾಧ್ಯತೆ ಇರುತ್ತದೆ. ಈ ನಿಟ್ಟಿನಲ್ಲಿ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರಿಗೆ ಅತ್ಯಧಿಕ ಮತ ನೀಡುವುದರ ಜೊತೆಗೆ ಅಕ್ಕಪಕ್ಕದವರಿಗೆ ಹೇಳಿ ಮತಹಾಕಿಸಿ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷ ಡಿ ಯಶೋಧರ, ಬಿಜೆಪಿ ಮುಖಂಡ ಎನ್ ಆರ್ ಲಕ್ಷ್ಮೀಕಾಂತ್, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸಿದ್ದಮ್ಮ ಸೇರಿದಂತೆ ವಿವಿಧ ಗ್ರಾಮದ ಮುಖಂಡರಿದ್ದರು.