i
ಕಾಂಗ್ರೆಸ್ ಸರ್ಕಾರದಲ್ಲಿ ಹೆಚ್ಚುತ್ತಿರುವ ಕೊಲೆ, ಲವ್ ಜಿಹಾದ್ ಪ್ರಕರಣಗಳು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: Increasing cases of murder, love jihad in Congress government…
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಮತೀಯ ಗಲಭೆಗಳು, ಕೊಲೆಗಳು ಹೆಚ್ಚಾಗುತ್ತಿವೆ. ಹುಬ್ಬಳ್ಳಿಯಲ್ಲಿ ನಡೆದ ನೇಹಾ ಫಟನೆಯನ್ನು ಲವ್ ಜಿಹಾದ್. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು ಸರ್ಕಾರ ಸತ್ತಿದೆಯೋ ಬದುಕಿದೆಯೋ ಎಂಬ ಭಾವನೆ ಸಾರ್ವಜನಿಕರಲ್ಲಿ ಮೂಡುತ್ತಿದೆ ಎಂದು ಚಿತ್ರದುರ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ ಎಸ್ ಸಂಪತ್ ಕುಮಾರ್ ತಿಳಿಸಿದರು.
ನೇಹಾ ಹತ್ಯೆ ಪ್ರಕರಣ ಖಂಡಿಸಿ ಬೆಂಗಳೂರುನಿಂದ ಹುಬ್ಬಳ್ಳಿ ಚಲೋ ಬೈಕ್ ರ್ಯಾಸಲಿ ಹೂರಟ್ಟಿದ್ದು ದಾರಿ ಮಧ್ಯದಲ್ಲಿ ಚಿತ್ರದುರ್ಗದ ಡಿ ಸಿ ಸರ್ಕಲ್ನಲ್ಲಿ ಪ್ರಕರಣ ಕುರಿತು ಮತನಾಡಿದ ಅವರು, ರಾಜ್ಯದಲ್ಲಿ ಅಧಿಕಾರ ಹಿಡಿದ ಕಾಂಗ್ರೆಸ್ ಪಕ್ಷ ಒಂದು ಧರ್ಮದವರಿಗೆ ಓಲೈಕೆ ಮಾಡುತ್ತಿವುದರಿಂದ ಈ ರೀತಿಯ ಘಟನೆಗಳು ಹೆಚ್ಚಾಗುತ್ತಿವೆ. ಹಿಂದೂ ಕೋಮಿನವರನ್ನು ಗುರಿಯಾಗಿಟ್ಟುಕೊಂಡು ಈ ರೀತಿಯ ಕೃತ್ಯ ಮಾಡಲಾಗುತ್ತಿದೆ. ರಾಜ್ಯದಲ್ಲಿ ಕಾನೂನಿನ ಭಯ ಇಲ್ಲವಾಗಿದೆ. ಕಾನೂನನ್ನು ಕೈಗೆ ತೆಗೆದುಕೊಂಡು ಅಪರಾಧಗಳನ್ನು ಮಾಡುತ್ತಿದ್ದಾರೆ. ಎಲ್ಲಿ ಅಂದರೆ ಅಲ್ಲಿ ಗಲಾಟೆಗಳು ನಡೆಯುತ್ತಿವೆ. ನಮ್ಮ ಪಾಲಿನ ಕರ್ತವ್ಯಗಳನ್ನು ಪಾಲಿಸಲು ಆಗುತ್ತಿಲ್ಲ, ದೇವರನ್ನು ಪೂಜೆ ಮಾಡುವಾಗಲು ಸಹ ಆಭಯದ ವಾತಾವರಣ ಉಂಟಾಗಿದೆ. ದೇವರ ನಾಮ ಶೋಕ್ಲವನ್ನು ಹೇಳಬೇಕಾದರೂ ಸಹಾ ನಮಗೆ ಸ್ವಾತಂತ್ರ್ಯ ಇಲ್ಲವಾಗಿದೆ. ಇದಕ್ಕೆ ಅಡ್ಡಿ ಉಂಟು ಮಾಡುತ್ತಿದ್ದಾರೆ.
ಅದರಲ್ಲೂ ಹಿಂದೂ ಮಹಿಳೆಯವರ ಮೇಲೆ ಸಾಕಷ್ಟು ಪ್ರಮಾಣದಲ್ಲಿ ದೌರ್ಜನ್ಯ ನಡೆಯುತ್ತಿದೆ. ಇಂತಹ ಪ್ರಕರಣಗಳು ನಡೆಯುತ್ತಿದ್ದರೂ ಸರ್ಕಾರ ಕಿಡಿಗೇಡಿಗಳ ಬೆನ್ನಿಗೆ ನಿಂತಿದೆ. ಗ್ಯಾರೆಂಟಿಗಳು ನಮ್ಮನ್ನು ಕಾಪಾಡುತ್ತವೆ ಎಂಬ ಭ್ರಮೆಯಲ್ಲಿ ಕಾಂಗ್ರೆಸ್ ಸರ್ಕಾರ ಇದೆಯೇ ಎಂಬ ಗೊಂದಲದಲ್ಲಿ ಸಾರ್ವಜನಿಕರು ಇದ್ದಾರೆ. ರಾಜ್ಯದಲ್ಲಿ ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಸರ್ಕಾರ ಎಚ್ಚೆತ್ತುಕೊಳ್ಳಬೇಕಿದೆ ಇದರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಬೇಕಿದೆ. ಇದರ ಬಗ್ಗೆ ಮುಖ್ಯಮಂತ್ರಿ, ಗೃಹ ಮಂತ್ರಿಗಳು ನೇಹಾ ಪ್ರಕರಣದ ಬಗ್ಗೆ ನಿರ್ಲಕ್ಷ್ಯ ಮಾತುಗಳನ್ನು ಆಡಿದ್ದಾರೆ. ಇದು ಪ್ರೇಮ ಪ್ರಸಂಗ ಎಂದಿದ್ದಾರೆ. ಇದರ ಬಗ್ಗೆ ಸರಿಯಾದ ತನಿಖೆ ನಡೆಸುವುದರ ಮೂಲಕ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಬೇಕಿದೆ ಎಂದು ಸಂಪತ್ ಕುಮಾರ್ ಸರ್ಕಾರವನ್ನು ಒತ್ತಾಯಿಸಿದರು.
ಬೆಂಗಳೂರಿನ ಡ್ರೈವರ್ ರೈಡರ್ ಕ್ಲಬ್ರಾಘವೇಂದ್ರ ಮಾತನಾಡಿದರು. ಜಿಲ್ಲಾ ಮಾಧ್ಯಮ ವಕ್ತಾರ ದಗ್ಗೆ ಶಿವಪ್ರಕಾಶ್, ವಕ್ತಾರ ನಾಗರಾಜ್ ಬೇದ್ರೆ, ಗ್ರಾಮಾಂತರ ಮಂಡಲ ಪ್ರದಾನ ಕಾರ್ಯದರ್ಶಿ ವಸಂತ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತಿ ಇದ್ದರು.