i
ಏ.22 ರಂದು ನೇಹಾ ಕೊಲೆ ಖಂಡಿಸಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: Massive protest by BJP on A.22 condemning Neha’s murder…
ಹುಬ್ಬಳ್ಳಿಯ ನೇಹ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಭಾರತಿಯ ಜನತಾ ಪಾರ್ಟಿಯವತಿಯಿಂದ ಬೃಹತ್ ಪ್ರತಿಭಟನೆಯನ್ನು
ಏ. 22ರಂದು ಹಮ್ಮಿಕೊಂಡಿರುವುದಾಗಿ ಬಿಜೆಪಿ ಜಲ್ಲಾಧ್ಯಕ್ಷ ಎ.ಮುರಳಿ ತಿಳಿಸಿದ್ದಾರೆ.
ಚಿತ್ರದುರ್ಗದ ನೀಲಕಂಠೇಶ್ವರ ದೇವಾಲಯದಿಂದ ಬೆಳಿಗ್ಗೆ 11 ಗಂಟೆಗೆ ಆರಂಭವಾಗುವ ಪ್ರತಿಭಟನೆಯಲ್ಲಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಮಾಜಿ ಸಚಿವ ಗೋವಿಂದ ಕಾರಜೋಳ, ಶಾಸಕ ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಕೆ.ಎನ್.ನವೀನ್, ಎನ್, ರವಿಕುಮಾರ ಚಿದಾನಂದ ಗೌಡ, ವೈ.ಎ.ನಾರಾಯಣಸ್ವಾಮಿ, ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ,
ನೇರ್ಲಗುಂಟೆ ತಿಪ್ಪೇಸ್ವಾಮಿ, ಎಸ್ ಲಿಂಗಮೂರ್ತಿ, ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವರು. ಜಿಲ್ಲೆಯ ಎಲ್ಲ ಮಂಡಲ ಅಧ್ಯಕ್ಷರು ಮಂಡಲ
ಪದಾಧಿಕಾರಿಗಳು ಯುವಮೊರ್ಚಾ ರೈತ ಮೋರ್ಚಾ ಮಹಿಳಾ ಮೋರ್ಚಾ, ಬಿಜೆಪಿ ಕಾರ್ಯಕರ್ತರು ಅಭಿಮಾನಿಗಳು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದಾರೆ.