i
ನಾವು ಮತದಾನ ಮಾಡಿದ್ದೇವೆ, ನೀವು ಮತದಾನ ಮಾಡಿ-ಜಿಲ್ಲಾಧಿಕಾರಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: We voted, you vote-District Officer…
ಚಿತ್ರದುರ್ಗ ಲೋಕಸಭಾ ಚುನಾವಣೆಯ ಅಂಗವಾಗಿ ನಗರದ ತಹಶೀಲ್ದಾರರ ಕಚೇರಿಯಲ್ಲಿ ಸ್ದಾಪಿಸಲಾಗಿರುವ ಅಂಚೆ ಮತ ಪತ್ರ ಸೌಲಭ್ಯ ಕೇಂದ್ರದಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಹಾಗೂ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಮತ ಚಲಾಯಿಸಿದರು.
ಮತದಾನ ಮಾಡಿದ ನಂತರ ಅವರು ಮಾಧ್ಯಮಗಳಿಗೆ ಮಾತನಾಡಿರುವ ಕುರಿತು ಮಾಹಿತಿ ನೀಡಿದರು. ಅಲ್ಲದೆ ಪ್ರತಿಯೊಬ್ಬರು ಮತದಾನ ಮಾಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮತದಾರರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಚಿತ್ರದುರ್ಗ ಉಪ ವಿಭಾಗಾಧಿಕಾರಿ ಕಾರ್ತೀಕ್, ತಹಶೀಲ್ಕಾರ್ ಡಾ.ನಾಗವೇಣಿ ಸೇರಿದಂತೆ ಮತ್ತಿತರ ಚುನಾವಣಾಧಿಕಾರಿಗಳು ಹಾಜರಿದ್ದರು.