i
ನರೇಂದ್ರ ಮೋದಿ 3ನೇ ಬಾರಿಗೆ ಪ್ರಧಾನಿಯಾಗಬೇಕು, ಗೋವಿಂದ ಕಾರಜೋಳ ಗೆಲ್ಲಬೇಕು: ಚಿತ್ರನಟಿ ರಾಗಿಣಿ…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಯಾವುದೇ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳದೆ ಸರಳ, ಸದೃಢವಾಗಿ ದೇಶವನ್ನು ಅಭಿವೃದ್ದಿ ಪಥದತ್ತ ಮುನ್ನಡೆಸಿದ ಖ್ಯಾತಿ ಪ್ರಧಾನಮಂತ್ರಿ ನರೇಂದ್ರಮೋದಿಯವರದ್ದು ಎಂದು ದಕ್ಷಿಣಭಾರತ ಬಹುಬಾಷ ಚಲನಚಿತ್ರನಟಿ ರಾಗಿಣಿ ದ್ವಿವೇದಿ ತಿಳಿಸಿದರು. ಅವರು, ಸೋಮವಾರ ರಾತ್ರಿ ಸುಮಾರು ೮.೩೦ರ ಸಮಯದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ರೋಡ್ ಶೋ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಅಭ್ಯರ್ಥಿ ಗೋವಿಂದ ಕಾರಜೋಳ ಮಾತನಾಡಿ, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ನಿರ್ದೇಶನದಂತೆ ಕನ್ನಡ ಚಿತ್ರರಂಗದ ಹೆಸರಾಂತ ನಟಿ ರಾಗಿಣಿ ದ್ವಿವೇದಿ ಚಳ್ಳಕೆರೆಗೆ ಆಗಮಿಸಿ ನಮ್ಮೊಂದಿಗೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ಧಾರೆ. ಪಕ್ಷ ಹಾಗೂ ನನ್ನನ್ನು ಈ ಕ್ಷೇತ್ರದಿಂದ ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದ್ಧಾರೆ. ಈ ಕ್ಷೇತ್ರದಲ್ಲಿ ಬಿಜೆಪಿ ಮತ್ತೊಮ್ಮೆ ತನ್ನ ಗೆಲುವನ್ನು ಸಾಧಿಸಲು ಇಂದಿನ ಈ ಕಾರ್ಯಕ್ರಮ ಹೆಚ್ಚು ಸಹಕಾರಿಯಾಗಿದೆ ಎಂದರು. ಪ್ರಾರಂಭದಲ್ಲಿ ವಾಲ್ಮೀಕಿ ವೃತ್ತದ ಮೂಲಕ ಮೆರವಣಿಗೆ ಚಾಲನೆ ನೀಡಲಾಯಿತು. ನಂತರ ಅಂಬೇಡ್ಕರ್ ಮತ್ತು ನೆಹರೂ ವೃತ್ತದ ಮೂಲಕ ಮೆರವಣಿಗೆ ಸಾಗಿತು. ದಾರಿಯುದ್ದಕ್ಕೂ ಪಟಾಕಿಸಿ ಸಿಡಿಸಿ ಸಂತಸ ವ್ಯಕ್ತಪಡಿಸಿದರು. ಮೆರವಣಿಗೆಯಲ್ಲಿ ಜೆಡಿಎಸ್ ಮುಖಂಡ ಎಂ.ರವೀಶ್ಕುಮಾರ್, ಪಿ.ತಿಪ್ಪೇಸ್ವಾಮಿ, ಬಿಜೆಪಿ ಮುಖಂಡ ಡಿ.ಸೋಮಶೇಖಮಂಡಿಮಠ, ಸೂರನಹಳ್ಳಿಶ್ರೀನಿವಾಸ್, ನಗರಸಭಾ ಸದಸ್ಯ ಎಚ್.ಜಯಣ್ಣ, ವೆಂಕಟೇಶ್ಯಾದವ್, ಕೆ.ಟಿ.ಕುಮಾರಸ್ವಾಮಿ, ಸಿ.ಎಸ್.ಪ್ರಸಾದ್, ಬಾಳೆಮಂಡಿರಾಮದಾಸ್, ಬಿ.ಎಸ್.ಶಿವಪುತ್ರಪ್ಪ, ಎಂ.ಎಸ್.ಜಯರಾಮ್, ವೈ.ಕಾಂತರಾಜ್ ಮುಂತಾದವರು ಇದ್ದರು.