i
ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಅವರನ್ನ ಗೆಲ್ಲಿಸಿ-ನಿಡುಗಲ್ಲು ಮಠದ ಸ್ವಾಮೀಜಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜ್ಯದಲ್ಲಿಯೇ ಪ್ರಭಾವಿ, ಪ್ರಸಿದ್ಧಿ ಪಡೆದಿರುವ ವಾಲ್ಮೀಕಿ ಸಮುದಾಯದ ಮಠಕ್ಕೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ನೂರಾರು ವಾಲ್ಮೀಕಿ ಸಮುದಾಯದ ಮುಖಂಡರ ಜೊತೆ ಬುಧವಾರ ಭೇಟಿ ನೀಡಿ ಮಠದ ಜಗದ್ಗುರು ಶ್ರೀ ವಾಲ್ಮಿಕಿ ಸಂಜಯ ಕುಮಾರ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು. ನಂತರ ಮಾತನಾಡಿದ ಸ್ವಾಮೀಜಿಗಳು, ಸರಳ, ಸಜ್ಜನಿಕೆ, ಜನರ ಜೊತೆ ನಿರಂತರ ಒಡನಾಟ ಹೊಂದಿರುವವರು, ಧಾರ್ಮಿಕ ಕ್ಷೇತ್ರವನ್ನು ಗೌರವಿಸುವಂತಹವರು ರಾಜಕೀಯ ಕ್ಷೇತ್ರದಲ್ಲಿ ಇರಬೇಕೆಂದು ಅಪೇಕ್ಷೆ ಪಡುತ್ತೇವೆ. ಅದರಲ್ಲೂ ಚಂದ್ರಪ್ಪ ಅವರಂತಹ ಸಜ್ಜನರ ಗೆಲುವು ಅಗತ್ಯವಾಗಿದೆ ಎಂದರು.
ವಾಲ್ಮಿಕಿ ಸಮುದಾಯದ ಹಿರಿಯ ನಾಯಕ, ಸಚಿವ ಎನ್. ರಾಜಣ್ಣ ಹಾಗೂ ನೂರಾರು ಮುಖಂಡರು ಚಂದ್ರಪ್ಪ ಅವರನ್ನು ಗೆಲ್ಲಿಸಲು ಶ್ರಮಿಸುತ್ತಿರುವ ವಿಷಯ ನಮ್ಮ ಗಮನಕ್ಕೆ ಇದೆ. ನಾವು ಕೂಡ ನೀವು ಗೆಲ್ಲಬೇಕೆಂದು ಆಶೀರ್ವದಿಸುತ್ತೇವೆ. ಕ್ಷೇತ್ರದ ಪ್ರಜ್ಞಾವಂತ ಮತದಾರರು ಹೃದಯವಂತ, ಸಜ್ಜನಿಕೆ ರಾಜಕಾರಣಿ ಚಂದ್ರಪ್ಪ ಅವರನ್ನು ತಮ್ಮ ಮನೆಯ ಮಗನೆಂದು ಭಾವಿಸಿ ಅವರನ್ನು ಗೆಲ್ಲಿಸಬೇಕೆಂದು ಕರೆ ನೀಡಿದರು. ನಾಡಿನ ಮಠ, ಮಾನ್ಯಗಳು ಹಾಗೂ ಜನರ ಕುರಿತು ಹೆಚ್ಚು ಗೌರವ ಭಾವನೆ ಹೊಂದಿರುವ ವಿನಯವಂತಿಕೆಯ ಚಂದ್ರಪ್ಪ ಪ್ರಜಾಪ್ರಭುತ್ವ ರಕ್ಷಣೆಗೆ ಬದ್ಧರಾಗಿದ್ದಾರೆ. ಆದ್ದರಿಂದ ಅವರು ಗೆಲ್ಲಬೇಕು ಎಂದರು.ವಾಲ್ಮೀಕಿ ಸಮುದಾಯದ ಮುಖಂಡರಾದ ರಾಮಾಂಜನೇಯ, ರಾಜೇಶ್, ರವಿ, ಚಂದ್ರು ಇತರರು ಇದ್ದರು.