i
ದೇಶದ ಭದ್ರತೆ, ಮಹಿಳೆಯರ ಸುರಕ್ಷತೆಗಾಗಿ ಬಿಜೆಪಿ ಗೆಲ್ಲಿಸಿ ಮೋದಿ ಪ್ರಧಾನಿ ಮಾಡಿ-ಎಸ್.ಆರ್.ಗಿರೀಶ್…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನರೇಂದ್ರಮೋದಿ ಮೂರನೆ ಬಾರಿಗೆ ದೇಶದ ಪ್ರಧಾನಿಯಾಗಬೇಕಾಗಿರುವುದರಿಂದ ಈ ಬಾರಿಯ ಲೋಕಸಭೆಚುನಾವಣೆ ಅತ್ಯಂತ ಮಹತ್ವವಾದುದು. ಅದಕ್ಕಾಗಿ ನಾಳೆ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಿ ಪಾರ್ಲಿಮೆಂಟ್ಗೆ ಕಳಿಸಿಕೊಡಬೇಕೆಂದು ಬಿಜೆಪಿ ಮುಖಂಡ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಲದ ನಿರ್ದೇಶಕ ಎಸ್.ಆರ್.ಗಿರೀಶ್ ಮತದಾರರಲ್ಲಿ ಮನವಿ ಮಾಡಿದರು.ಹೊಳಲ್ಕೆರೆ ವಿಧಾನಸಭಾ ಕ್ಷೇತ್ರ ರಾಮಗಿರಿ ಹೋಬಳಿ ತುಪ್ಪದಹಳ್ಳಿ, ಬಿದರೆಕೆರೆ, ನವಣೆಕೆರೆ, ಮುದ್ದಾಪುರ ಲಂಬಾಣಿಹಟ್ಟಿ, ಕಣಿವೆಹಳ್ಳಿ, ಕೆಂಚಾಪುರ, ಸಿಂಗೇನಹಳ್ಳಿ ಲಂಬಾಣಿಹಟ್ಟಿ ಗ್ರಾಮಗಳಲ್ಲಿ ಮನೆ ಮನೆಗೆ ತೆರಳಿ ಕರಪತ್ರಗಳನ್ನು ವಿತರಿಸಿ ಮತಯಾಚಿಸಿ ಮಾತನಾಡಿದರು.ದೇಶವನ್ನು ವಿಶ್ವಗುರುವಾಗಿಸುವಲ್ಲಿ ದಿಟ್ಟ ಹೆಜ್ಜೆ ಇಟ್ಟಿರುವ ನರೇಂದ್ರಮೋದಿ ರವರು ಮತ್ತೆ ಪ್ರಧಾನಿಯಾದಾಗ ಮಾತ್ರ ಭಾರತ ಸುಭದ್ರವಾಗಿರಲು ಸಾಧ್ಯ. ಸಣ್ಣ ಸಣ್ಣ ಸಮುದಾಯಗಳನ್ನು ಗುರುತಿಸಿ ಸಮಾಜದ ಮುಖ್ಯವಾಹಿನಿಗೆ ತರುವುದಕ್ಕಾಗಿ ಅನೇಕ ಯೋಜನೆಗಳನ್ನು ಕೊಟ್ಟಿದ್ದಾರೆ. ವಿಶ್ವಕರ್ಮ ಯೋಜನೆ, ಆಯುಷ್ಮಾನ್ ಭಾರತ್, ಕಾರ್ಮಿಕರಿಗೆ ಹೆಲ್ತ್ ಕಾರ್ಡ್, ಒಂದೆ ಭಾರತ್ ರೈಲು,ರಾಷ್ಟ್ರೀಯ ಹೆದ್ದಾರಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ ೩೭೦ ರದ್ದುಪಡಿಸಿ ನುಡಿದಂತೆ ನಡೆದಿದ್ದಾರೆ. ಇಂತಹ ದಿಟ್ಟ ಪ್ರಧಾನಿ ನಮಗೆ ಸಿಗುವುದಿಲ್ಲ. ಈ ಅವಕಾಶವನ್ನು ಕಳೆದುಕೊಳ್ಳದೆ ಬಿಜೆಪಿ.ಯ ಗೋವಿಂದ ಕಾರಜೋಳರನ್ನು ಗೆಲ್ಲಿಸಿ ಮೋದಿ ಕೈಬಲಪಡಿಸಿ ಎಂದು ವಿನಂತಿಸಿದರು.ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಜಿ.ಎಂ.ಸುರೇಶ್, ಮಾಜಿ ಮಂಡಲ ಅಧ್ಯಕ್ಷ ರಾಜಶೇಖರ್ ಸೇರಿದಂತೆ ಹಲವಾರು ಮುಖಂಡರು ಗ್ರಾಮಸ್ಥರು ಈ ಸಂದರ್ಭದಲ್ಲಿದ್ದರು.