i
ಭೋವಿ ಗುರುಪೀಠಕ್ಕೆ ಭೇಟಿ ನೀಡಿ ಅಹಿಂದಾ ಮಠಧೀಶರುಗಳ ಆಶೀರ್ವಾದ ಪಡೆದ ರಾಜ್ಯಾಧ್ಯಕ್ಷ ವೇಣುಗೋಪಾಲ್ …
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಅತಿ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ಎಂ.ಸಿ ವೇಣುಗೋಪಾಲ್ ಭೋವಿ ಗುರುಪೀಠಕ್ಕೆ ಭೇಟಿ ನೀಡಿ ಅಹಿಂದಾ ಮಠಧೀಶರುಗಳ ಆಶೀರ್ವಾದರು. ಈ ವೇಳೆ ಮಠಾಧೀಶರು ಇವರನ್ನು ಸನ್ಮಾನಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಎಂ.ಸಿ ವೇಣುಗೋಪಾಲ್, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೋಟೆ ನಾಡು ಚಿತ್ರದುರ್ಗಕ್ಕೆ ಪ್ರಿಯಾಂಕ ಗಾಂಧಿ ಯವರು ಬಹಿರಂಗ ಸಭೆ ಹಾಗೂ ಕಾಂಗ್ರೆಸ್ ಪ್ರಚಾರಕ್ಕೆ ಆಗಮಿಸಿದ್ದರ ಹಿನ್ನೆಲೆ ಯಲ್ಲಿ ಚಿತ್ರದುರ್ಗಕ್ಕೆ ಆಗಮಿಸಿ ವಿವಿಧ ಮಠಾಧೀಶರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದೇನೆ ಎಂದರು.
ಈ ಸಂದರ್ಭದಲ್ಲಿ ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಮಡಿವಾಳ ಗುರು ಪೀಠದ ಮಡಿವಾಳ ಮಾಚಿದೇವ ಸ್ವಾಮೀಜಿ, ಕೃಷ್ಣ ಯಾದವಾನಂದ ಗುರು ಪೀಠದ ಯಾದವ ನಂದ ಸ್ವಾಮೀಜಿ, ಶಿವಮೊಗ್ಗ ಈಡಿಗ ಮಠದ ಮಠಾಧೀಶರಾದ ಶ್ರೀ ರೇಣುಕನದ ಸ್ವಾಮೀಜಿ, ಹರಿಹರದ ರಾಜನಹಳ್ಳಿ ಗುರುಪೀಠದ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ, ಪಂಚಮಶಾಲಿ ಸಮುದಾಯದ ಪ್ರಣವಾನಂದ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು ಹಾಗೂ ಕರ್ನಾಟಕ ರಾಜ್ಯ ಕಾಡುಗೊಲ್ಲರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಅಧ್ಯಕ್ಷ ಸಿ ಶಿವು ಯಾದವ್, ಸಾಂಗ್ ಕಾಂಗ್ರೆಸ್ ಕುಶಲಕರ್ಮಿ ರಾಜ್ಯಾಧ್ಯಕ್ಷ ಆರ್ ಪ್ರಸನ್ ಕುಮಾರ್, ನಗರಸಭೆ ನಾಮ ನಿರ್ದೇಶಿತ ಸದಸ್ಯ ನೇತಾಜಿ ಪ್ರಸನ್ನ, ಕುಶಲಕರ್ಮಿ ಜಿಲ್ಲಾಧ್ಯಕ್ಷ ಚೇತನ್ ಕಣಿವೆಹಳ್ಳಿ, ಕೊರಟಗೆರೆ ಕಾಂಗ್ರೆಸ್ ಮುಖಂಡ ಮಹಾಲಿಂಗಪ್ಪ ಸೇರಿದಂತೆ ಮುಖಂಡರಿದ್ದರು.