i
ಬಹಿರಂಗ ಪ್ರಚಾರಕ್ಕೆ ತೆರೆ ಮನೆ ಮನೆ ಪ್ರಚಾರಕ್ಕೆ ಅವಕಾಶ…
ಚಂದ್ರವಳ್ಳಿ ನ್ಯೂಸ್, ಮೊಳಕಾಲ್ಮೂರು:
ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ.
ತಾಲೂಕಿನಲ್ಲಿ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಬಿ.ಜೆ.ಪಿ. ಪಕ್ಷಗಳ ನಡುವೆ ಭಾರೀ ಪೈಪೋಟಿ ಏರ್ಪಟ್ಟಿದ್ದು, ಬಹಿರಂಗ ಪ್ರಚಾರ ಕಾರ್ಯವು ಅಂತ್ಯವಾಗಿದ್ದು, ಕಾಂಗ್ರೆಸ್ ಮತ್ತು ಬಿ.ಜೆ.ಪಿ.ಪಕ್ಷಗಳ ಪ್ರಚಾರ ಕಾರ್ಯವು ಬಿರುಸಿನಿಂದ ಸಾಗಿದೆ.
ಈ ಎರಡೂ ಪಕ್ಷಗಳ ಪೈಪೋಟಿಯಲ್ಲಿ ಬಿ.ಎಸ್.ಪಿ.ಯು ಸಹ ಪ್ರಚಾರ ಕಾರ್ಯದಲ್ಲಿ ಕೈಗೊಳ್ಳಲಾಗಿತ್ತು.
ಲೋಕಸಭಾ ಚುನಾವಣಾ ಬಹಿರಂಗ ಪ್ರಚಾರ ಕಾರ್ಯವು ಏ.೨೪ ರಂದು ಸಂಜೆ ಅಂತ್ಯವಾಗಿದ್ದು, ನಾನಾ ರಾಜಕೀಯ ಪಕ್ಷಗಳ ಕಾರ್ಯಕರ್ತರ ಮುಖಂಡರು ಚುನಾವಣಾ ಬಹಿರಂಗ ಪ್ರಚಾರಕಾರ್ಯವನ್ನು ಬಿರುಸಿನಿಂದ ಮಾಡಿದರು. ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರಕಾರ್ಯವು ಅಂತ್ಯಗೊಳ್ಳುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಬಿ.ಜೆ.ಪಿ.ಪಕ್ಷಗಳು ತಾಲೂಕಿನ ನಾನಾ ಗ್ರಾಮಗಳಲ್ಲಿ ಆಯಾ ಪಕ್ಷಗಳ ಕಾರ್ಯಕರ್ತ ಮುಖಂಡರು ಅಬ್ಬರದ ಪ್ರಚಾರ ಕೈಗೊಂಡು ಮತದಾರರನ್ನು ಓಲೈಸುವಲ್ಲಿ ಹರಸಾಹಸ ಪಡುವಂತಾಗಿದೆ. ಕಾಂಗ್ರೆಸ್ ಮತ್ತು ಬಿ.ಜೆ.ಪಿ.ಪಕ್ಷಗಳ ಕಾರ್ಯಕರ್ತ ಮುಖಂಡರು ತಾಲೂಕಿನ ನಾನಾ ಗ್ರಾಮಗಳಲ್ಲಿ ತಮ್ಮ ಪಕ್ಷಗಳ ಅಭ್ಯರ್ಥಿಗಳ ಪರ ಭಾರೀ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮತ್ತು ಬಿ.ಜೆ.ಪಿ. ಪಕ್ಷದ ಬಹುತೇಕ ಪ್ರಮುಖ ಪದಾಧಿಕಾರಿಳು ಅಭ್ಯರ್ಥಿಯ ಪ್ರಚಾರದ ಜೊತೆಗೆ ಪ್ರಮುಖ ಮುಖಂಡರನ್ನು ಸೇರ್ಪಡೆ ಮಾಡಿಕೊಂಡು ಅಬ್ಬರದ ಪ್ರಚಾರ ಕೈಗೊಳ್ಳಲಾಯಿತು.