i
ರೈತ ಮಕ್ಕಳಿಗಾಗಿ ಕೃಷಿ ಪ್ರಾಯೋಗಿಕ ತರಬೇತಿ: ಮೇ 8 ಮತ್ತು 9ಕ್ಕೆ ಮುಂದೂಡಿಕೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2024-25ನೇ ಸಾಲಿಗೆ ಕೃಷಿ ಕೋಟಾದಡಿ ರಾಜ್ಯದ ಕೃಷಿ ಹಾಗೂ ಕೃಷಿ ಸಂಬಂಧಿತ ವಿಶ್ವವಿದ್ಯಾನಿಲಯಗಳಿಗೆ ಸ್ನಾತಕ ಪದವಿಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ನಗರದ ಎ.ಪಿ.ಎಂ.ಸಿ ಆವರಣದ ಕೃಷಿ ತಂತ್ರಜ್ಞರ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಪ್ರಾಯೋಗಿಕ ತರಬೇತಿಯನ್ನು ಮೇ 8 ಮತ್ತು 9ಕ್ಕೆ ಮುಂದೂಡಿಕೆ ಮಾಡಲಾಗಿದೆ.
ಕೃಷಿ ಪ್ರಾಯೋಗಿಕ ತರಬೇತಿಯನ್ನು ಈ ಹಿಂದೆ ಮೇ 6 ಮತ್ತು 7ರಂದು ನಡೆಸಲು ಉದ್ದೇಶಿಸಲಾಗಿತ್ತು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣೆಯ ಕಾರಣದಿಂದ ಕೃಷಿ ಪ್ರಾಯೋಗಿಕ ತರಬೇತಿಯನ್ನು ಮೇ 8 ಮತ್ತು 9ಕ್ಕೆ ಮುಂದೂಡಲಾಗಿದೆ.
2024ರ ಮೇ 14ರಂದು 17 ಕೇಂದ್ರಗಳಲ್ಲಿ ನಿಗಧಿಯಾಗಿರುವ ಪ್ರಾಯೋಗಿಕ ಪರೀಕ್ಷೆ ಕುರಿತ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ 2024ರ ಏಪ್ರಿಲ್ 6ರ ಪರಿಸ್ಕೃತ ಅಧಿಸೂಚನೆಯ ಪ್ರತಿಯನ್ನು ಸಂಸ್ಥೆಯ ಆವರಣದಲ್ಲಿ ಪ್ರಕಟಿಸಲಾಗಿದ್ದು, ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ 9742455666 ಅಥವಾ 9448656231 ದೂರವಾಣಿ ಮೂಲಕ ಸಂಪರ್ಕಿಸಬಹುದು ಎಂದು ಐಎಟಿ ಸಂಸ್ಥೆಯ ಅಧ್ಯಕ್ಷ ಜಿ.ಸಿ.ರಂಗಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.