i
ಪತ್ನಿಯೊಂದಿಗೆ ತೆರಳಿ ಮತದಾನ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಚಿತ್ರದುರ್ಗ ಲೋಕಸಭಾ ಚುನಾವಣೆಯ ಅಂಗವಾಗಿ ಏಪ್ರಿಲ್-26 ರಂದು ಶುಕ್ರವಾರ ಚಳ್ಳಕೆರೆ ಮತ ಕ್ಷೇತ್ರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹಾಗೂ ಸಚಿವರ ಪತ್ನಿ ಹರ್ಷಿಣಿಯವರು ಮತಗಟ್ಟೆಗೆ ತೆರಳಿ ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಿದರು.ಮತದಾನ ಮಾಡಿದ ನಂತರ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ದಿನವು ಅತಿದೊಡ್ಡ ಹಬ್ಬವಾಗಿದ್ದು ನಮ್ಮ ದೇಶದ ಭವಿಷ್ಯ ಮತದಾರರ ಕೈಯಲ್ಲಿರುತ್ತದೆ, ಪ್ರತಿಯೊಬ್ಬರೂ ಮತದಾನ ಮಾಡುವ ಮೂಲಕ ಹಕ್ಕು ಚಲಾಯಿಸಿ ಉತ್ತಮ ಅಭ್ಯರ್ಥಿ ಆಯ್ಕೆ ಮಾಡಿಕೊಳ್ಳಬೇಕು. ಅಲ್ಲದೆ ತಮ್ಮ ಭವಿಷ್ಯ ರೂಪಿಸುವ ಸರ್ಕಾರವನ್ನು ಅರ್ಹ ಮತದಾರರೇ ಆಯ್ಕೆ ಮಾಡಬೇಕು ಎಂದು ಹೇಳಿದರು.