i
ಮತದಾನ ಚಲಾಯಿಸಿದ ಮಾಜಿ ಶಾಸಕಿ ಪೂರ್ಣಿಮಾ ಮತ್ತು ಶ್ರೀನಿವಾಸ್ …
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮತದಾನದ ಹಬ್ಬವಾದ ಇಂದು ಕ್ಷೇತ್ರದ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಮತ್ತು ಅವರ ಪತಿ ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಹಾಗೂ ಅವರ ಪುತ್ರಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.ಮತದಾನ ಮಾಡಿ ಹೊರ ಬಂದ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ರವರು ಮಾತನಾಡಿ ಪ್ರತಿಯೊಬ್ಬರೂ ಮತದಾನ ಮಾಡುವ ಮೂಲಕ ಈ ದೇಶದ ಅಭಿವೃದ್ಧಿಗಾಗಿ ಉತ್ತಮ ನಾಯಕನನ್ನು ಆಯ್ಕೆ ಮಾಡುವ ಹಕ್ಕನ್ನು ಈ ದೇಶದ ಸಂವಿಧಾನ ಪ್ರತಿಯೊಬ್ಬ ಮತದಾರನಿಗೆ ನೀಡಿದೆ. ಇಂತಹ ಸುವರ್ಣ ಅವಕಾಶವನ್ನು ಬಳಸಿಕೊಂಡು ಪ್ರತಿಯೊಬ್ಬ ಮತದಾರರು ತಮ್ಮ ಹಕ್ಕನ್ನು ಚಲಾಯಿಸುವ ಮೂಲಕ ನಿಮ್ಮ ನಾಯಕನನ್ನು ನೀವೇ ಆಯ್ಕೆ ಮಾಡಬೇಕು ಎಂಬುದಾಗಿ ಹೇಳಿದರು.ಮತದಾನ ಮಾಡಿದ ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಮಾತನಾಡಿ,ನಮ್ಮನ್ನಾಳುವ ಸರ್ಕಾರವನ್ನು ನಾವೇ ಆಯ್ಕೆ ಮಾಡುವ ಅವಕಾಶವನ್ನು ನಮ್ಮ ಸಂವಿಧಾನ ನಮಗೆ ಕೊಟ್ಟಿದ್ದು, ಈ ಅವಕಾಶವನ್ನು ಮತದಾರರು ಸದುಪಯೋಗಪಡಿಸಿಕೊಳ್ಳುವ ಮೂಲಕ ನಮ್ಮ ನಾಯಕರನ್ನು ನಾವೇ ಆಯ್ಕೆ ಮಾಡಬೇಕು ಎಂಬುದಾಗಿ ಹೇಳಿದರು.