i
ಚುನಾವಣೆ ಬಹಿಷ್ಕರಿಸಿ ಮತದಾನದಿಂದ ದೂರ ಉಳಿದ ಗ್ರಾಮಸ್ಥರು…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಮತದಾನ ದಿನವೇ ತಾಲೂಕಿನ ತೂಬಗೆರೆ ಹೋಬಳಿಯ ಗೊಲ್ಲಹಳ್ಳಿ ಗ್ರಾಮಸ್ಥರು ಚುನಾವಣೆ ಬಹಿಷ್ಕರಿಸಿದ್ದಾರೆ.
ಗ್ರಾಮದಲ್ಲಿ ಸ್ಮಶಾನಕ್ಕೆ ಜಮೀನು ಮಂಜೂರು ಮಾಡಿಲ್ಲ. ಸಮುದಾಯ ಭವನವಿಲ್ಲ ಕಂದಾಯ ಇಲಾಖೆ ಸಾಗುವಳಿ ಚೀಟಿ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ, ಮತದಾನ ಬಹಿಷ್ಕರಿಸಿದ್ದಾರೆ.
ಗ್ರಾಮದಲ್ಲಿ 380 ಮತಗಳಿದ್ದು, ಇಡೀ ಗ್ರಾಮಸ್ಥರು ಒಕ್ಕೊರಲಿನಿಂದ ಮತದಾನ ಬಹಿಷ್ಕರಿಸುವ ನಿರ್ಧಾರ ಕೈಗೊಂಡಿದ್ದಾರೆ. ಗ್ರಾಮದ ಸಮಸ್ಯೆಗಳು ಬಗೆಹರಿಸುವವರೆಗೂ ಯಾವುದೇ ಚುನಾವಣೆಗಳಲ್ಲಿ ಮತದಾನ ಮಾಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಮಹಿಳೆಯರು, ಮಕ್ಕಳು ಸೇರಿ ಪ್ರತಿಭಟನೆ ನಡೆಸಿದರು.
ಮತದಾನ ಬಹಿಷ್ಕಾರ ಮಾಡುವುದಾಗಿ ಬ್ಯಾನರ್ ಹಾಕಿದ್ದು, ಮತಗಟ್ಟೆಗೆ ತೆರಳದೆ ಬೀದಿಯಲ್ಲೇ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ.
ಗ್ರಾಮಸ್ಥರು ಮತದಾನ ಬಹಿಷ್ಕಾರ ಮಾಡಿದರೂ ಈವರೆಗೆ ಯಾವುದೇ ಅಧಿಕಾರಿಗಳು ಸ್ಥಳಕ್ಕೆ ಬಂದು ಅಹವಾಲು ಸ್ವೀಕರಿಸಿಲ್ಲ ಎಂದು ದೂರಿದ್ದಾರೆ.