i
ರಸ್ತೆ ದಾಟುತ್ತಿದ್ದ ವ್ಯಕ್ತಿ ಲಾರಿಗೆ ಬಲಿ…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ಶಿಕಾರಿಪುರದ ನೊಳಂಬ ವೀರಶೈವ ಕಲ್ಯಾಣ ಮಂಟಪದ ಎದುರು ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಲಾರಿ ಡಿಕ್ಕಿ ಹೊಡೆದು ಆತ ಸ್ಥಳದಲ್ಲೇ ಸಾವಿಗೀಡಾದ ಘಟನೆ ನಿನ್ನೆ ಸಂಜೆ ಸಂಭವಿಸಿದೆ.
ನ್ಯಾಮತಿ ತಾಲೂಕಿನ ಗುಡ್ಡಳ್ಳಿ ಗ್ರಾಮದ ವೀರನಗೌಡ(45) ಸಾವಿಗೀಡಾದವರು. ಕಲ್ಯಾಣ ಮಂಟಪದಲ್ಲಿ ನಡೆಯಲಿದ್ದ ಮದುವೆಗೆ ಅವರು ಆಗಮಿಸಿದ್ದರು.
ಎದುರಿನ ಅಂಗಡಿಗೆ ಹೋಗಲು ರಸ್ತೆ ದಾಟುತ್ತಿದ್ದ ವೇಳೆ ಲಾರಿ ಡಿಕ್ಕಿಯಾಗಿದೆ. ಅಲ್ಲಿದ್ದರು ಲಾರಿಯನ್ನು ತಡೆದು ಚಾಲಕನನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.