i
ಮರಕ್ಕೆ ಕಾರು ಡಿಕ್ಕಿ : ಉದ್ಯಮಿ ಸಾವು…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ :
ಇಲ್ಲಿಗೆ ಸಮೀಪದ ಶಂಕರಘಟ್ಟದಲ್ಲಿ ಕಾರೊಂದು ಮರಕ್ಕೆ ಡಿಕ್ಕಿಯಾದ ಪರಿಣಾಮ ಓರ್ವರು ಸಾವನ್ನಪ್ಪಿದ್ದಾರೆ.
ಸೋಮವಾರ ಬೆಳಗ್ಗೆ ಈ ಘಟನೆ ಸಂಭವಿಸಿದೆ. ನಗರದ ಎನ್ ಟಿ ರಸ್ತೆಯ ಭಾರತಕಾಲೋನಿ ನಿವಾಸಿ ಶಂಕರ್ ಮೃತರು.
ಶಂಕರಘಟ್ಟದ ರಂಗನಾಥಪುರ ಸಮೀಪ ಮರಕ್ಕೆ ಕಾರು ಡಿಕ್ಕಿ ಯಾಗಿ ಶಂಕರ್ (55)ಬೆಳಗ್ಗೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಕಾರಿನಲ್ಲಿ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.