i
ಕೇಬಲ್ ಅಳವಡಿಕೆಗೆ ಅರ್ಜಿ ಸಲ್ಲಿಸಲು ಅವಕಾಶ…
ಚಂದ್ರವಳ್ಳಿ ನ್ಯೂಸ್, ತುಮಕೂರು:
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪಾಲಿಕೆಗೆ ಸಂಬಂಧಿಸಿದ ಬೀದಿದೀಪ ಕಂಬಗಳ ಮೇಲೆ ಅನಧಿಕೃತವಾಗಿ ಕೇಬಲ್ಗಳನ್ನು ಅಳವಡಿಸಿರುವುದು ಕಂಡು ಬಂದಿದ್ದು, ಇದರಿಂದಾಗಿ ಸಾರ್ವಜನಿಕರ ಸುರಕ್ಷತೆಗೆ ತೊಂದರೆಯಾಗಿರುತ್ತದೆ. ಸದರಿ ಕೇಬಲ್ಗಳನ್ನು ಅಳವಡಿಸಿರುವವರು/ಏಜೆನ್ಸಿದಾರರು ಮೇ ೧೦ರ ಒಳಗಾಗಿ ಅರ್ಜಿ ಸಲ್ಲಿಸಿ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಅನುಮತಿ ಪಡೆಯಲು ಸೂಚಿಸಿದೆ. ತಪ್ಪಿದ್ದಲ್ಲಿ ಪಾಲಿಕೆಯಿಂದ ಮುಂದಿನ ಸೂಕ್ತ ಕ್ರಮ ವಹಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.