i
ಸಹಕಾರ ಸಂಘಗಳ ಲೆಕ್ಕ ಪರಿಶೋಧಕರ ಮಾಹಿತಿ ನೀಡಲು ಸೂಚನೆ…
ಚಂದ್ರವಳ್ಳಿ ನ್ಯೂಸ್, ತುಮಕೂರು:
ಜಿಲ್ಲೆಯಲ್ಲಿರುವ ಸಹಕಾರ ಸಂಘಗಳ/ಸೌಹಾರ್ದ ಸಹಕಾರಿಗಳು ತಮ್ಮ ವಾರ್ಷಿಕ ಮಹಾಸಭೆಯಲ್ಲಿ ಲೆಕ್ಕಪರಿಶೋಧನೆಗಾಗಿ ಲೆಕ್ಕಪರಿಶೋಧಕರನ್ನು ನೇಮಕ ಮಾಡಿಕೊಂಡು ಮಹಾಸಭೆ ಜರುಗಿದ ೭ ದಿನಗಳೊಳಗಾಗಿ ಜಿಲ್ಲೆಯ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಜಂಟಿ ನಿರ್ದೇಶಕರ ಕಚೇರಿಗೆ ಮಾಹಿತಿ ನೀಡಬೇಕು. ಸಭೆಯಲ್ಲಿ ಲೆಕ್ಕಪರಿಶೋಧಕರನ್ನು ಆಯ್ಕೆ ಮಾಡಿಕೊಂಡ ಸಭಾ ನಡಾವಳಿ ಪ್ರತಿಯನ್ನು ಸಂಘದ ಅಧ್ಯಕ್ಷರು ಮತ್ತು ಮುಖ್ಯಕಾರ್ಯನಿರ್ವಾಹಕರು ಜಂಟಿಯಾಗಿ ದೃಢೀಕರಿಸಿ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಜಂಟಿ ನಿರ್ದೇಶಕರ ಕಛೇರಿ, ೧೩ನೇ ಕ್ರಾಸ್, ಎಸ್.ಎಸ್. ಪುರಂ, ತುಮಕೂರು ಇವರಿಗೆ ಸಲ್ಲಿಸಬೇಕೆಂದು ಜಿಲ್ಲಾ ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಜಂಟಿ ನಿರ್ದೇಶಕ ಹೆಚ್.ಸಿ ಬಸವರಾಜ ಸೂಚಿಸಿದ್ದಾರೆ.