i
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪೊಲೀಸ್ ಜೀಪ್…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ನಗರದ ಪಾಲನಜೋಗಿಹಳ್ಳಿ ಬಳಿ ಪೊಲೀಸ್ ಜೀಪ್ ಅಪಘಾತ ಸಂಭವಿಸಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಹೊಸಹಳ್ಳಿ ಪೊಲೀಸ್ ಠಾಣೆ ಇನ್ಸೆಕ್ಟರ್ ರಾವ್ ಗಣೇಶ್ ಜನಾರ್ಧನ್ ಅವರ ಜೀಪ್ ಅಪಘಾತಕ್ಕೀಡಾಗಿದೆ ಎಂದು ತಿಳಿದುಬಂದಿದೆ.
ವ್ಯಾಜ್ಯವೊಂದರ ತನಿಖೆಗಾಗಿ ಹೊರಟಿದ್ದ ಹೊಸಹಳ್ಳಿ ಪೊಲೀಸ್ ಠಾಣೆ ಇನ್ಸೆಕ್ಟರ್ ರಾವ್ ಗಣೇಶ್ ಜನಾರ್ಧನ್ ಅವರ ಜೀಪ್ ನಗರದ ಹೊರವಲಯದ ಪಾಲನಜೋಗಿಹಳ್ಳಿ ಬಳಿ ಅಪಘಾತಕ್ಕಿಡಾಗಿದೆ.
ಭಾನುವಾರ ರಾತ್ರಿ ತೋಟದ ಬಳಿ ಕೇಬಲ್ ಕಳ್ಳತನ ಮಾಡಲು ಬಂದಿದ್ದ ಮಹಿಳೆಯನ್ನು ಕಲ್ಲುಕುಂಟೆ ರೈತರು ಹಿಡಿದು ಹೊಸಹಳ್ಳಿ ಪೊಲೀಸರಿಗೆ ಒಪ್ಪಿಸಿದ್ದರು.
ಈ ಪ್ರಕರಣದ ತನಿಖೆ ನಡೆಸಿ ಬಂಧಿತ ಮಹಿಳೆಯನ್ನು ಸಾಂತ್ವಾನ ಕೇಂದ್ರಕ್ಕೆ ಬಿಟ್ಟು, ಮರಳಿ ಮನೆಗೆ ತೆರಳುತ್ತಿದ್ದ ವೇಳೆ, ಜೀಪ್ ಅಪಘಾತಕ್ಕೀಡಾಗಿದೆ.
ಘಟನೆಯಲ್ಲಿ ಇನ್ಸೆಕ್ಟರ್ ರಾಚದ ಗಣೇಶ್ ಜನಾರ್ಧನ್ ಹಾಗೂ ಚಾಲಕ ವೆಂಕಟೇಶ್ ಇಬ್ಬರಿಗೂ ತರಚಿದ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಪಾಲನಜೋಗಿಹಳ್ಳಿ ಬಳಿ ಅಡ್ಡಬಂದ ನಾಯಿಯನ್ನು ರಕ್ಷಿಸುವ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಜೀಪ್ ಅಪಘಾತಕ್ಕೀಡಾಗಿ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.