i
ಬಯಲು ಸೀಮೆ ಅಭಿವೃದ್ಧಿ ಮಂಡಳಿಯ ಪ್ರಭಾರೆ ಕಾರ್ಯದರ್ಶಿ ಎಸ್. ವೈ ಬಸವರಾಜಪ್ಪ ಲೋಕಾಯುಕ್ತ ಬಲೆಗೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಗುತ್ತಿಗೆದಾರರೊಬ್ಬರಿಂದ ಲಂಚ ಸ್ವೀಕರಿಸುವ ವೇಳೆ ಬಯಲು ಸೀಮೆ ಅಭಿವೃದ್ಧಿ ಮಂಡಳಿಯ ಪ್ರಭಾರೆ ಕಾರ್ಯದರ್ಶಿ ಎಸ್. ವೈ ಬಸವರಾಜಪ್ಪರವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸೋಮವಾರ ಮಧ್ಯಾಹ್ನ 2-00 ಗಂಟೆ ಸುಮಾರಿಗೆ ಕಾಮಗಾರಿ ಬಿಲ್ಲುಗಳ ಮಂಜೂರಾತಿಗಾಗಿ ಗುತ್ತಿಗೆದಾರ ಜಗಳೂರಿನ ಸಿದ್ದನಗೌಡ ಇವರಿಂದ ವೈ.ಎಸ್. ಬಸವರಾಜಪ್ಪ ನಾಲ್ಕು ಲಕ್ಷ ರೂ ನಗದು ಸ್ವೀಕರಿಸುವ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಬಂಧಿಸಿದ್ದಾರೆ. ಜಗಳೂರು ತಾಲ್ಲೂಕಿನಲ್ಲಿ ಒಪ್ಪಂದದ ಆಧಾರದ ಬಯಲುಸೀಮೆ ಅಭಿವೃದ್ಧಿ ಮಂಡಳಿಯ ಕಾಮಗಾರಿ ನಿರ್ವಹಿಸುತ್ತಿದ್ದರೆನ್ನಲಾಗಿದೆ. ಬಾಕಿ ಇದ್ದ ಕಾಮಗಾರಿ ಹಣ ಬಿಡುಗಡೆ ಮಾಡಲು 4 ಲಕ್ಷ ರೂ ಗಳಿಗೆ ಬೇಡಿಕೆಯಿಟ್ಟಿದ್ದರೆನ್ನಲಾಗಿದೆ. ಸೋಮವಾರ ಕಚೇರಿಯಲ್ಲಿ 4 ಲಕ್ಷ ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಅಧೀಕ್ಷರಾದ ವಾಸುದೇವ್ ರಾವ್ ಹಾಗೂ ಸಿಬ್ಬಂದಿಗಳು ಬಂಧಿಸಿದ್ದಾರೆ.