i
40 ಕೋಟಿ ಖರ್ಚು ಮಾಡಿ ವಿಡಿಯೋ ರಿಲೀಸ್ ಮಾಡಿದ ಡಿಕೆಶಿ-ಕುಮಾರಸ್ವಾಮಿ ಆರೋಪ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು :
ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ ಈ ಕುರಿತು ಸುದ್ದಿಗೋಷ್ಠಿಯಲ್ಲಿ ತಿಳಿಸಿದ ಮಾಹಿತಿ ಇದೀಗ ತೀವ್ರ ಸಂಚಲನ ಸೃಷ್ಟಿಸಿದೆ.
ಅಶ್ಲೀಲ ವಿಡಿಯೋ ಪ್ರಕರಣದ ರೂವಾರಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಈ ವಿಡಿಯೋಗಳನ್ನ ಬಿಡುಗಡೆ ಮಾಡಲು 30 ರಿಂದ 40 ಕೋಟಿ ರೂ. ಖರ್ಚು ಮಾಡಿದ್ದಾರೆ ಎಂದು ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಇದಲ್ಲದೆ ಯಾವ ವಿಡಿಯೋಗಳನ್ನು ರಿಲೀಸ್ ಮಾಡಬೇಕು, ಯಾರಿಂದ ದೂರು ಕೊಡಿಸಬೇಕು ಎಂದು ಕುಳಿತು ಸ್ಕೆಚ್ ಮಾಡಿದ್ದು ಕಾಂಗ್ರೆಸ್ ಹೈಕಮಾಂಡ್ ರಣದೀಪ್ ಸಿಂಗ್ ಸುರ್ಜೆವಾಲ ಎಂದು ಕುಮಾರಸ್ವಾಮಿ ಗಂಬೀರ ಆರೋಪ ಮಾಡಿದ್ದಾರೆ.
ಹಾಸನ ಅಶ್ಲೀಲ ವಿಡಿಯೋಗಳನ್ನು ಡಿಕೆ ಶಿವಕುಮಾರ್ ವ್ಯವಸ್ಥಿತವಾಗಿ ಬಿಡುಗಡೆ ಮಾಡಿಸಿದ್ದಾರೆ. ರೇವಣ್ಣ ಪರ ನಾನು ವಕಾಲತು ವಹಿಸುತ್ತಿಲ್ಲ. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ಆದರೆ ಈ ವಿಡಿಯೋ ಹಿಡಿದು ರಾಜಕೀಯ ಮಾಡಿದವರಿಗೂ ಶಿಕ್ಷೆ ಆಗಬೇಕು ಎಂದು ಹೆಚ್ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಕಾಂಗ್ರೆಸ್ ಹೈಕಮಾಂಡ್ ಕೂಡ ಅಷ್ಟೇ ಪಾಲುದಾರ. ನನ್ನ ಮಗ ಎಂದು ಪ್ರಜ್ವಲ್ ರೇವಣ್ಣನಿಗೆ ಹೇಳಿದ್ದೇನೆ. ನಾನು ಸಭೆಯಲ್ಲಿ ಹೇಳಿದ್ದೇನೆ ನಿಜ. ನನಗೆ ಈ ರೀತಿಯ ವಿಡಿಯೋ ಪ್ರಕರಣ ಗೊತ್ತಿರಲಿಲ್ಲ. ನಾನು ಜನರ ಭಾವನೆಗಳ ಬಗ್ಗೆ ಮಾತನಾಡಿದ್ದೇನೆ. ಆದರೆ ಡಿಕೆ ಶಿವಕುಮಾರ್ ಬೇರೆ ಬೇರೆ ಕತೆ ಕಟ್ಟಿ ಆರೋಪಿಸುತ್ತಿದ್ದಾರೆ. ಕುಮಾರಸ್ವಾಮಿ ಹಾಗೂ ರೇವಣ್ಣ ಕುಟುಂಬದ ಮದ್ಯೆ ಒಡಕು ಇತ್ತು. ಅದಕ್ಕೆ ಕುಮಾರಸ್ವಾಮಿ ಹೀಗೆ ಮಾಡಿದ್ದಾರೆ ಅಂತ ಡಿಕೆಶಿ ಹೇಳಿದ್ದಾರೆ. ಅವರಿಗೆ ಸ್ವಲ್ಪವಾದ್ರೂ ಮನುಷ್ಯತ್ವ ಇದೆಯಾ. ಮೋದಿ ಮಹಿಳೆಯರ ಕ್ಷಮೆ ಕೇಳಲಿ ಅಂತ ರಾಹುಲ್ ಗಾಂಧಿ ಹೇಳಿದ್ದಾರೆ. ಯಾವುದೇ ಕಾರಣಕ್ಕೂ ಪ್ರಜ್ವಲ್ ಬಗ್ಗೆ ಸಾಫ್ಟ್ ಕಾರ್ನರ್ ಇಲ್ಲ ಅಂತ ಮೋದಿ ಹೇಳಿದ್ದಾರೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ. ಪ್ರಜ್ವಲ್ ಪ್ರಕರಣದಲ್ಲಿ ಹದಿನಾರು ವರ್ಷಕ್ಕಿಂತ ಕಡಿಮೆ ವಯಸಿನ ಸಂತ್ರಸ್ಥೆಯರಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಮುಂದಿನ ಪ್ರಧಾನಿ ಅಂತಾ ಅವರನ್ನು ಘೋಷಣೆ ಮಾಡಿಕೊಂಡಿದ್ದೀರಲ್ಲಾ? ಯಾವ ಆಧಾರದ ಮೇಲೆ ರಾಹುಲ್ ಈ ಹೇಳಿಕೆ ಕೊಟ್ಟರು. ಪೋಕ್ಸೋ ಕೇಸ್ ಹಾಕಲು ಹೊರಟಿದ್ದೀರಾ? ಇದಕ್ಕಾಗಿ ದೂರುದಾರರನ್ನು ಹುಡುಕುತ್ತಿದ್ದಾರೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ನಾನೂರು ಜನ ಸಂತ್ರಸ್ಥರು ಇದಾರೆ ಅಂತಾ ಹೇಳ್ತಾರೆ. ಅವರನ್ನು ಯಾಕೆ ವಿಚಾರಣೆಗೆ ಕರೆದಿಲ್ಲ. ಯಾವನಪ್ಪ ಎಸ್ಐಟಿ ಮುಖ್ಯಸ್ಥ ಎಂದು ಹೆಚ್ಡಿ ಕುಮಾರಸ್ವಾಮಿ ಖಾರವಾಗಿ ಪ್ರಶ್ನಿಸಿದ್ದಾರೆ.