i
ಜೂನ್-19 ರಿಂದ ಮೂರು ದಿನ ರಾಷ್ಟ್ರೀಯ ಸಮ್ಮೇಳನ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು “sustainable Ground water Management for water Security” ವಿಷಯದ ಮೇಲೆ ಜೂನ್ 19 ರಿಂದ 21 ರವರೆಗೆ ಮೂರು ದಿನಗಳ ಕಾಲ ರಾಷ್ಟ್ರೀಯ ಸಮ್ಮೇಳನ ಆಯೋಜಿಸಲಾಗುತ್ತಿದ್ದು, ಈ ಸಮ್ಮೇಳನದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳಿಂದ ನುರಿತ ವಿಜ್ಞಾನಿಗಳು ವಿಷಯಾಧಾರಿತ ಉಪನ್ಯಾಸಗಳನ್ನು ನೀಡಲಿದ್ದಾರೆ.
ಈ ಸಮ್ಮೇಳನದಲ್ಲಿ ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು ಸಂಶೋಧನಾ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಯುವ ವಿಜ್ಞಾನಿಗಳು ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಅಲ್ಲದೇ, ಈ ಸಮ್ಮೇಳನದಲ್ಲಿ ರಿಸರ್ಜ್ ಪೇಪರ್ ಮಂಡಿಸಬಹುದಾಗಿದ್ದು, ಆಯ್ಕೆಯಾದ ರಿಸರ್ಜ್ ಪೇಪರ್ಗಳಿಗೆ ನಗದು ಬಹುಮಾನವನ್ನು ನೀಡಲಾಗುವುದು. ಈ ಸಮ್ಮೇಳನದಲ್ಲಿ ಭಾಗವಹಿಸಲು ಜೂನ್ 10 ರೊಳಗಾಗಿ (Google form-https://forms.gle/QDXV64LDibFbHydc9) ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ವಿವರಗಳಿಗೆ ಕಾರ್ಯಕ್ರಮ ಸಂಯೋಜಕರ ಮೊಬೈಲ್ ಸಂಖ್ಯೆ 9845258894 ಮತ್ತು 9743084194 ಅಥವಾ ಅಕಾಡೆಮಿಯ ವೆಬ್ಸೈಟ್ www.kstacademy.in ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎ.ಎಂ.ರಮೇಶ್ ತಿಳಿಸಿದ್ದಾರೆ.