i
ಪ್ರಜ್ವಲ್ ಮಾದರಿಯಲ್ಲಿ ಸಿದ್ದರಾಮಯ್ಯ, ಪರಮೇಶ್ವರ ಅವರ ವಿಡಿಯೋ ಬರಬಹುದು-ರಮೇಶ್ ಜಾರಕಿಹೊಳಿ…
ಚಂದ್ರವಳ್ಳಿ ನ್ಯೂಸ್, ಗೋಕಾಕ್:
ಇಂದಲ್ಲ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ ಅವರ ವಿಡಿಯೋಗಳೂ ಪ್ರಜ್ವಲ್ ರೇವಣ್ಣ ಅವರಂತೆಯೇ ಹೊರಬರಬಹುದು. ಸಿದ್ದರಾಮಯ್ಯ, ಪರಮೇಶ್ವರ್ ಇಬ್ಬರಿಗೆ ಸೂಚನೆಕೊಡುತ್ತಿದ್ದೇನೆ ಈಗಲೇ ಆ ಮಹಾನಾಯಕನನ್ನು ತಡೆಯಿರಿ ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಕಿವಿ ಮಾತು ಹೇಳಿದ್ದಾರೆ.ಗೋಕಾಕದಲ್ಲಿ ಮತದಾನ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ರಾಜಕಾರಣದಲ್ಲಿ ಸೈದ್ಧಾಂತಿಕ ಹೋರಾಟ ಮುಗಿದು ಹೋಗಿದೆ. ಒಬ್ಬರನ್ನು ಕಂಡರೆ ಮತ್ತೊಬ್ಬರು ತುಳಿಯುವವರೇ ಜಾಸ್ತಿಯಾಗಿದ್ದಾರೆ. ಸಿ.ಡಿ, ಪೆನ್ಡ್ರೈವ್ಪ್ರಕರಣಗಳು ಯಾವುದು ಒಳ್ಳೆಯದಲ್ಲ. ಇದನ್ನು ಪಕ್ಷಾತೀತವಾಗಿ ಇಲ್ಲಿಗೆ ಮುಗಿಸಬೇಕು. ಇಲ್ಲದಿದ್ದರೆ ಮುಂದೊಂದು ದಿನ ಸಿದ್ದರಾಮಯ್ಯ ಮತ್ತು ಡಾ.ಜಿ.ಪರಮೇಶ್ವರ್ಅವರ ಸಿ.ಡಿಗಳು ಆಚೆ ಬಂದರೂ ಅಚ್ಚರಿ ಪಡುವಂಥದ್ದು ಏನೂ ಇಲ್ಲ ಎಂದು ಆತಂಕ ವ್ಯಕ್ತಪಡಿಸಿದರು.
ನನ್ನ ಖಾಸಗಿ ವಿಡಿಯೋಗಳು ಹೊರಗೆ ಬಂದಾಗಲೇ ಮಹಾನಾಯಕನೊಬ್ಬ ಪ್ರತಿಷ್ಠಿತ ಕುಟುಂಬಕ್ಕೆ ಖೆಡ್ಡಾ ತೋಡುತ್ತಿದ್ದಾನೆ ಎಂದು ಎಚ್ಚರಿಕೆ ಕೊಟ್ಟಿದ್ದೆ. ಆಗ ನನ್ನ ಮಾತು ಯಾರು ನಂಬಿರಲಿಲ್ಲ. ಈಗ ಏನಾಗಿದೆ ಎಂದು ರಮೇಶ್ ಜಾರಕಿಹೊಳಿ ಮಾಧ್ಯಮದವರನ್ನ ಪ್ರಶ್ನಿಸಿದರು.ಪ್ರಜ್ವಲ್ರೇವಣ್ಣ ಪೆನ್ಡ್ರೈವ್ಆಚೆ ಬಂದಿದ್ದರ ಹಿಂದೆ ನಾನು ಮೊದಲ ದಿನವೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ಕೈವಾಡವಿದೆ ಎಂದು ಹೇಳಿದ್ದೆ. ನನ್ನ ಮಾತನ್ನು ಯಾರೂ ಕೂಡ ಗಂಭೀರವಾಗಿ ಪರಿಗಣಿಸಲಿಲ್ಲ. ಈಗ ವಕೀಲ ದೇವರಾಜೇಗೌಡ ಬಿಡುಗಡೆ ಮಾಡಿರುವ ಆಡಿಯೋ ಏನು ಹೇಳುತ್ತದೆ ಎಂದು ಪ್ರಶ್ನೆ ಮಾಡಿದರು. ಸಿ.ಎಂ ಅವರಿಗೆ ಮುಂದೆ ಕೈಮುಗಿದು ಕೇಳಿಕೊಳ್ಳುತ್ತೇನೆ. ಈ ವಿಡಿಯೋ ಪ್ರಕರಣಗಳಿಗೆ ಪಕ್ಷಾತೀತವಾಗಿ ಕೊನೆಹಾಡಿ ಎಂದು ಆಗ್ರಹಿಸಿದರು.ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಕೈವಾಡವಿದೆ ಎಂದು ಹೇಳುತ್ತಿದ್ದಾರೆ. ಆದರೆ, ನನ್ನ ಪ್ರಕರಣದಲ್ಲಿ ನೇರ ಕೈವಾಡ ಇದೆ. ಎಲ್ಲ ಸಾಕ್ಷಿ, ದಾಖಲೆಗಳೂ ನನ್ನ ಬಳಿ ಇವೆ. ಪ್ರಜ್ವಲ್ ವಿಚಾರದಲ್ಲಿ ಪರೋಕ್ಷವಾಗಿ ಆರೋಪಿ ಎನ್ನುತ್ತಿದ್ದಾರೆ. ಆದರೆ, ನನ್ನ ವಿಚಾರದಲ್ಲಿ ನೇರ ಆರೋಪಿ ಎಂದು ಪ್ರಶ್ನೆಯೊಂದಕ್ಕೆಉತ್ತರಿಸಿದರು.ನನ್ನ ಪ್ರಕರಣ ಸಿಬಿಐಗೆ ಕೊಟ್ಟರೆ ಎಲ್ಲ ಸಾಕ್ಷಿ ಒದಗಿಸುತ್ತೇನೆ. ನನ್ನ ಕೇಸಿನಲ್ಲಿ ಶಿವಕುಮಾರ್ ಮಾತ್ರವಲ್ಲ, ಕೆಲವು ನಮ್ಮವರೂ ಭಾಗಿಯಾಗಿದ್ದಾರೆ. ಹೀಗಾಗಿ ನನಗೆ ಎಸ್.ಐ.ಟಿ ಮೇಲೆ ಆಗಲೂ ವಿಶ್ವಾಸ ಇರಲಿಲ್ಲ ಈಗಲೂ ಇಲ್ಲ ಎಂದು ತಿಳಿಸಿದರು.