i
ಬಸವಣ್ಣ ಜಯಂತಿ ಅಂಗವಾಗಿ ಬೈಕ್ ರ್ಯಾಲಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವೇಶ್ವರರ ಜಯಂತಿ ಅಂಗವಾಗಿ ವೀರಶೈವ ಸಮಾಜದಿಂದ ಗುರುವಾರ ನಗರದಲ್ಲಿ ಬೈಕ್ ರ್ಯಾಲಿ ನಡೆಯಿತು.ನೀಲಕಂಠೇಶ್ವರಸ್ವಾಮಿ ದೇವಸ್ಥಾನದಿಂದ ಹೊರಟ ಬೈಕ್ ರ್ಯಾಲಿ ಆನೆಬಾಗಿಲು, ದೊಡ್ಡಪೇಟೆ, ರಂಗಯ್ಯನಬಾಗಿಲು, ಮದಕರಿ ಸರ್ಕಲ್, ಗಾಯತ್ರಿ ಸರ್ಕಲ್, ಜೆ.ಸಿ.ಆರ್. ಆರ್.ಟಿ.ಓ. ಕಚೇರಿ ರಸ್ತೆ, ಕೆಳಗೋಟೆ, ಡಿ.ಸಿ.ಸರ್ಕಲ್, ಕನಕವೃತ್ತದ ಮೂಲಕ ನೀಲಕಂಠೇಶ್ವರಸ್ವಾಮಿ ದೇವಸ್ಥಾನಕ್ಕೆ ಆಗಮಿಸಿದ ಬೈಕ್ ರ್ಯಾಲಿ ಮುಕ್ತಾಯಗೊಂಡಿತು.ವೀರಶೈವ ಸಮಾಜದ ಅಧ್ಯಕ್ಷ ಎಸ್.ಎಂ.ಎಲ್.ತಿಪ್ಪೇಸ್ವಾಮಿ, ಸಹ ಕಾರ್ಯದರ್ಶಿ ಜಿತೇಂದ್ರ, ಪಂಚಮಸಾಲಿ ಸಮಾಜದ ಪ್ರಕಾಶ್, ವಿಶ್ವ ಹಿಂದು ಪರಿಷತ್ನ ರುದ್ರೇಶ್, ವೀರಶೈವ ಅರ್ಬನ್ ಸೊಸೈಟಿಯ ನಿರ್ದೇಶಕ ಸಿದ್ದವ್ವನಹಳ್ಳಿ ಪರಮೇಶ್, ಪಿಳ್ಳೆಕೆರನಹಳ್ಳಿ ಬಸವರಾಜ್, ವೀರೇಂದ್ರ, ನಗರಸಭೆ ಸದಸ್ಯರುಗಳಾದ ಕೆ.ಬಿ.ಸುರೇಶ್, ಜಯಣ್ಣ, ವೀರಶೈವ ಲಿಂಗಾಯಿತ ಯುವ ವೇದಿಕೆ ಅಧ್ಯಕ್ಷ ಹೆಚ್.ಎಂ.ಮಂಜುನಾಥ್ ಇನ್ನು ಅನೇಕರು ಬೈಕ್ ರ್ಯಾಲಿಯಲ್ಲಿ ಭಾಗವಹಿಸಿದ್ದರು.ಬಸವಣ್ಣನವರ ಭಾವಚಿತ್ರವುಳ್ಳ ಕೇಸರಿ ಭಾವುಟಗಳು ಮೆರವಣಿಗೆಯಲ್ಲಿ ರಾರಾಜಿಸಿದವು.