i
ವಿಕಲಚೇತನ ವಿದ್ಯಾರ್ಥಿಗಳಿಗೆ ಶೇ. 10ರಷ್ಟು ಮೀಸಲಾತಿ….
ಚಂದ್ರವಳ್ಳಿ ನ್ಯೂಸ್, ತುಮಕೂರು:
ಕರ್ನಾಟಕದ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ ಕಿತ್ತೂರು ರಾಣಿ ಚೆನ್ನಮ್ಮ/ ಡಾ.ಬಿ.ಆರ್.ಅಂಬೇಡ್ಕರ್/ ಅಟಲ್ ಬಿಹಾರಿ ವಾಜಪೇಯಿ/ ಶ್ರೀಮತಿ ಇಂದಿರಾಗಾಂಧಿ/ ಏಕಲವ್ಯ ಮಾದರಿ ವಸತಿ ಶಾಲೆ/ ಕಾಲೇಜುಗಳ ಪೈಕಿ ವಸತಿ ಶಾಲೆಗಳಲ್ಲಿ ಶೇ.೨೫ಕ್ಕಿಂತ ಹೆಚ್ಚಿನ ಅಂಗವಿಕಲತೆ ಪ್ರಮಾಣದ ವಿಕಲಚೇತನ ಮಕ್ಕಳು/ ಎಸ್ಐವಿಗೆ ತುತ್ತಾದ ಪೋಷಕರ ಮಕ್ಕಳು/ ಒಬ್ಬ ಪೋಷಕರನ್ನು ಮಾತ್ರ ಹೊಂದಿರುವ ಅಥವಾ ಅನಾಥ ಮಕ್ಕಳಿಗೆ ಶೇ.೧೦ರಷ್ಟು ಮೀಸಲಾತಿ ನಿಗಧಿಪಡಿಸಿ ೬ನೇ ತರಗತಿ ಪ್ರವೇಶ ಕಲ್ಪಿಸಲಾಗುತ್ತಿದ್ದು, ಜಿಲ್ಲೆಯ ವಿಕಲಚೇತನ ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಲು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ಕೋರಿದ್ದಾರೆ.