i
ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಚಾಲಕ-ಕಂ-ನಿರ್ವಾಹಕ ಹುದ್ದೆಗಳ ನೇಮಕಾತಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಚಾಲಕ-ಕಂ-ನಿರ್ವಾಹಕ ಹುದ್ದೆಗಳ ನೇರ ನೇಮಕಾತಿಗಾಗಿ ಹೊರಡಿಸಲಾಗಿದ್ದ ಅಧಿಸೂಚನೆಯನ್ವಯ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ ಮಾರ್ಚ್ 6 ರಿಂದ ಮೂಲ ದಾಖಲಾತಿ / ದೇಹದಾರ್ಢ್ಯತೆ ಪರಿಶೀಲನೆ ಪ್ರಾರಂಭಿಸಲಾಗಿದ್ದು, ಪ್ರಸ್ತುತ ಸದರಿ ಪರಿಶೀಲನಾ ಕಾರ್ಯವನ್ನು ಮೇ 15 ರಿಂದ ಬೆಂಗಳೂರಿನ ಶಾಂತಿನಗರದಲ್ಲಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಛೇರಿಯಲ್ಲಿ ಮುಂದುವರೆಸಲಾಗುತ್ತಿದೆ.
ಈ ಸಂಬಂಧ ಅಭ್ಯರ್ಥಿಗಳು ಮೇ 8 ರಿಂದ ನಿಗಮದ ಅಧಿಕೃತ ವೆಬ್-ಸೈಟ್ ksrtcjobs.karnataka.gov.in ರಲ್ಲಿ ಕರೆಪತ್ರವನ್ನು ಡೌನ್-ಲೋಡ್ ಮಾಡಿಕೊಂಡು ಕರೆಪತ್ರದಲ್ಲಿ ತಿಳಿಸಿರುವ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ನಿಗದಿತ ದಿನಾಂಕ ಹಾಗೂ ಸಮಯಕ್ಕೆ ಹಾಜರಾಗಲು ಈ ಮೂಲಕ ಸೂಚಿಸಲಾಗಿದೆ.
ವಿಶೇಷ ಸೂಚನೆ: ಪ್ರಸ್ತುತ ಅಭ್ಯರ್ಥಿಗಳ ಮೂಲ ದಾಖಲಾತಿ / ದೇಹದಾಢ್ರ್ಯತೆ ಪರಿಶೀಲನೆ ಮಾತ್ರ ನಡೆಸಲಾಗುತ್ತಿದೆ. ಅರ್ಹರಾದ ಅಭ್ಯರ್ಥಿಗಳಿಗೆ ಚಾಲನಾ ವೃತ್ತಿ ಪರೀಕ್ಷೆ ನಡೆಸುವ ಕುರಿತು ಪ್ರತ್ಯೇಕ ದಿನಾಂಕ / ಸ್ಥಳವನ್ನು ನಿಗಧಿಪಡಿಸಲಾಗುವುದು. ಸದರಿ ಹುದ್ದೆಯ ಆಯ್ಕೆಯು ಗಣಕೀಕೃತ ಚಾಲನಾ ವೃತ್ತಿ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಹಾಗೂ ಅಧಿಸೂಚನೆ ಸಂದರ್ಭದಲ್ಲಿ ಚಾಲ್ತಿಯಲ್ಲಿದ್ದ ಮೀಸಲಾತಿ ನಿಯಮಗಳಿಗೆ ಅನುಗುಣವಾಗಿ ಪಾರದರ್ಶಕವಾಗಿ ನಡೆಯುವುದರಿಂದ ಮಾನವ ಹಸ್ತಕ್ಷೇಪ ಇರುವುದಿಲ್ಲ. ಆದುದರಿಂದ ಅಭ್ಯರ್ಥಿಗಳು ಯಾವುದೇ ಶಿಫಾರಸ್ಸು, ಮಧ್ಯವರ್ತಿಗಳ ಅಮಿಷಗಳಿಗೆ ಒಳಗಾಗಬಾರದೆಂದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.