![](https://www.chandravallinews.com/wp-content/uploads/2024/05/Haralaiah-swamiji.jpg)
i
ಯಾವುದೇ ಜಾತಿಯ ಪ್ರತಿಭಾವಂತ ಮಕ್ಕಳು ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಿ-ಹರಳಯ್ಯ ಸ್ವಾಮೀಜಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
೨೦೨೩-೨೪ ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ., ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಗಳಿಸಿರುವ ಯಾವುದೇ ಜಾತಿ ಜನಾಂಗ, ಯಾವುದೇ ಧರ್ಮದ ಪ್ರತಿಭಾನ್ವಿತ ಮಕ್ಕಳಿಗೆ ಮಹಾ ಶಿವಶರಣ ಹರಳಯ್ಯ ಗುರುಪೀಠ, ಹರಳಯ್ಯ ವಿದ್ಯಾಸಂಸ್ಥೆ, ಹರಳಯ್ಯ ಆಂಗ್ಲ ಮಾಧ್ಯಮ ಶಾಲೆ ಸಹಯೋಗದೊಂದಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ. ಅರ್ಹ ವಿದ್ಯಾರ್ಥಿಗಳು ದಿನಾಂಕ: ೨೫-೫-೨೦೨೪ ರ ಒಳಗಾಗಿ ಮಹಾಶಿವಶರಣ ಗುರುಪೀಠ ಐಮಂಗಲ ಇಲ್ಲಿ ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಹೆಸರು ನೊಂದಾಯಿಸಿಕೊಳ್ಳುವಂತೆ ಬಸವ ಹರಳಯ್ಯ ಮಹಾಸ್ವಾಮೀಜಿ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಮೊ: ೯೪೪೯೯೩೯೦೧೬, ೭೨೫೯೫೫೧೩೨೫ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.