![](https://www.chandravallinews.com/wp-content/uploads/2024/05/WhatsApp-Image-2024-05-14-at-8.15.32-PM.jpeg)
i
ಐರಾವತ ಬಸ್ ಬೆಂಕಿಗೆ ಆಹುತಿ…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ :
ನಗರದಿಂದ ಮೈಸೂರಿಗೆ ತೆರಳುತ್ತಿದ್ದ ರಾಜ್ಯ ಸಾರಿಗೆ ಸಂಸ್ಥೆಯ ಐರಾವತ ಬಸ್ವೊಂದರಲ್ಲಿ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಬಸ್ ಬಹುತೇಕ ಸುಟ್ಟು ಹೋದ ಘಟನೆ ಸಂಭವಿಸಿದೆ.
ಅದೃಷ್ಟವಶಾತ್ಪ್ರಯಾಣಿಕರೆಲ್ಲರೂ ಪಾರಾಗಿದ್ದಾರೆ.
ತರಿಕೆರೆಯ ಅಜ್ಜಂಪುರ ಕ್ರಾಸ್ಬಳಿ ತಡರಾತ್ರಿ 1.30 ರ ಸಮಯಕ್ಕೆ ಈ ಘಟನೆ ಸಂಭವಿಸಿದೆ. KA 01 f 9077 ಐರಾವತ ಬಸ್ಶಿವಮೊಗ್ಗದಿಂದ ಪ್ರಯಾಣಿಕರನ್ನು ಕರೆದುಕೊಂಡು ಮೈಸೂರಿಗೆ ತೆರಳುತ್ತಿತ್ತು. ಬಸ್ನಲ್ಲಿ ಡ್ರೈವರ್, ಕಂಡಕ್ಟರ್ಸೇರಿದಂತೆ ನಲವತ್ತು ಮಂದಿ ಪ್ರಯಾಣಿಸುತ್ತಿದ್ದರು.
ಅಜ್ಜಂಪುರ ಕ್ರಾಸ್ಬಳಿಯಲ್ಲಿ ಬಸ್ನಲ್ಲಿ ಹೊಗೆ ಬರುತ್ತಿರುವುದನ್ನು ಗಮನಿಸಿದ ಡ್ರೈವರ್ತಕ್ಷಣವೇ ವಾಹನವನ್ನು ಬದಿಗೆ ಹಾಕಿ ಪ್ರಯಾಣಿಕರಿಗೆ ಇಳಿಯುವಂತೆ ಸೂಚಿಸಿದ್ದಾರೆ. ಪ್ರಯಾಣಿಕರು ಸಹ ತಮ್ಮ ತಮ್ಮ ಲಗೇಜ್ನೊಂದಿಗೆ ಬಸ್ನಿಂದ ಇಳಿದಿದ್ದಾರೆ. ಇದರ ನಡುವೆ ಡ್ರೈವರ್ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದರಾದರೂ ಬಸ್ ಹಿಂಬದಿಯ ಇಂಜಿನ್ಗೆ ಬೆಂಕಿ ತಗುಲುತ್ತಿದ್ದರಿಂದ ಅದರ ತೀವ್ರತೆ ಹೆಚ್ಚಿತ್ತು. ಹೀಗಾಗಿ ಅಗ್ನಿಶಾಮಕ ಸಿಬ್ಬಂದಿಗೆ ಫೋನ್ಮಾಡಿದ್ದಾರೆ.
ತಕ್ಷಣವೇ ಸ್ಥಳಕ್ಕೆ ಬಂದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಇನ್ನೂ ಘಟನೆಗೆ ಶಾರ್ಟ್ಸರ್ಕಿಟ್ಕಾರಣ ಎಂದು ಹೇಳಲಾಗಿದ್ದು, ಈ ಸಂಬಂಧ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.