![](https://www.chandravallinews.com/wp-content/uploads/2024/05/WhatsApp-Image-2024-05-16-at-5.36.57-PM-1-1024x366.jpeg)
i
ಬಿಜೆಪಿ ಅಭ್ಯರ್ಥಿ ನಾರಾಯಣಸ್ವಾಮಿ ಪರ ಬಿರುಸಿನ ಪ್ರಚಾರ ಮಾಡಿದ ನವೀನ್…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿರವರ ಪರ ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಎಸ್.ಜೆ.ಎಂ.ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಗುರುವಾರ ಮತಯಾಚಿಸಿದರು.
ಕಳೆದ ಇಪ್ಪತ್ತು ವರ್ಷಗಳಿಂದಲೂ ಶಿಕ್ಷಕರುಗಳ ಸಮಸ್ಯೆಗಳ ನಿವಾರಣೆಗೆ ಹೋರಾಟ ಮಾಡಿಕೊಂಡು ಬರುತ್ತಿರುವ ಡಾ.ವೈ.ಎ.ನಾರಾಯಣಸ್ವಾಮಿರವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ಶಿಕ್ಷಕರುಗಳಲ್ಲಿ ಮನವಿ ಮಾಡಿದರು.
ಬಿಜೆಪಿ. ಎಸ್ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ್ಕಾರಜೋಳ, ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾರೆಡ್ಡಿ, ಶ್ಯಾಮಲ ಶಿವಪ್ರಕಾಶ್, ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್, ವಕ್ತಾರ ನಾಗರಾಜ್ಬೇದ್ರೆ ಮತಯಾಚನೆಯಲ್ಲಿದ್ದರು.