![](https://www.chandravallinews.com/wp-content/uploads/2024/05/WhatsApp-Image-2024-05-16-at-5.55.30-PM-2.jpeg)
i
ಮೇ.20ರಂದು ವಿಶ್ವ ಜೇನು ದಿನಾಚರಣೆ….
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಬೆಂಗಳೂರು ಕೃಷಿ ತಂತ್ರಜ್ಞರ ಸಂಸ್ಥೆ ಹಾಗೂ ಚಿತ್ರದುರ್ಗದ ಕೃಷಿ ತಂತ್ರಜ್ಞರ ಸಂಸ್ಥೆ ಪ್ರಾದೇಶಿಕ ಘಟಕ ವತಿಯಿಂದ ಇದೇ ಮೇ.20ರಂದು ಸೋಮವಾರ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 3 ರವರೆಗೆ ಹಿರಿಯೂರಿನ ಅಕ್ಷಯ ಫುಡ್ ಪಾರ್ಕ್ ರಸ್ತೆಯಲ್ಲಿನ ಶ್ರೀನಿವಾಸ್ ಅವರ ಜೇನು ಕೃಷಿ ತೋಟದಲ್ಲಿ ವಿಶ್ವ ಜೇನು ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕಾರ್ಯಕ್ರಮ ಉದ್ಘಾಟಿಸುವರು. ನಿವೃತ್ತ ಕೃಷಿ ನಿರ್ದೇಶಕಿ ಹಾಗೂ ಕೃಷಿ ತಂತ್ರಜ್ಞರ ಸಂಸ್ಥೆ ಅಧ್ಯಕ್ಷೆ ಸಿ.ಎನ್.ನಂದಿನಿಕುಮಾರಿ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಬೆಂಗಳೂರು ಕೃಷಿ ತಂತ್ರಜ್ಞರ ಸಂಸ್ಥೆ ಉಪಾಧ್ಯಕ್ಷ ಎಂ.ಮಹಂತೇಶಪ್ಪ, ಕಾರ್ಯದರ್ಶಿ ವೀರಣ್ಣ ಕೆ.ಕಮತರ, ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್, ಕೃಷಿ ತಂತ್ರಜ್ಞರ ಸಂಸ್ಥೆ ಚಿತ್ರದುರ್ಗ ಪ್ರಾದೇಶಿಕ ಘಟಕದ ಅಧ್ಯಕ್ಷ ಜಿ.ಸಿ.ರಂಗಸ್ವಾಮಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಸವಿತಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಟಿ.ರಾಜಣ್ಣ, ಕೃಷಿ ತಂತ್ರಜ್ಞರ ಸಂಸ್ಥೆ ಉಪಾಧ್ಯಕ್ಷ ಕಟ್ಟಾ ಶ್ರೀನಿವಾಸ ರೆಡ್ಡಿ ಭಾಗವಹಿಸುವರು. ಸಮಗ್ರ ಜೇನು ಕೃಷಿ ಕುರಿತು ಎಸ್.ಎಂ.ಶಾಂತವೀರಯ್ಯ, ಸಂಪೂರ್ಣ ಆಹಾರ ಕುರಿತು ಬಿ.ಎಸ್.ಬಸವರಾಜಪ್ಪ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.