![](https://www.chandravallinews.com/wp-content/uploads/2024/05/WhatsApp-Image-2024-05-17-at-8.56.39-PM-1024x565.jpeg)
i
ಡೆಂಗ್ಯೂ ಮತ್ತು ಮಾನ್ಸೂನ್ ಬಗ್ಗೆ ಎಚ್ಚರ ವಹಿಸಿ : ತಹಶೀಲ್ದಾರ್…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ :
ಬರ ನಿರ್ವಹಣೆ, ಡೆಂಗ್ಯೂ ಮತ್ತು ಮಾನ್ಸೂನ್ ಬಗ್ಗೆ ನಿರ್ಲಕ್ಷ್ಯ ಮಾಡುವಂತಿಲ್ಲ, ಕುಡಿಯುವ ನೀರಿನ ಬಗ್ಗೆ ಪ್ರತಿಯೊಂದು ಇಲಾಖೆಗಳು ಸರಿಯಾದ ಸ್ವಚ್ಚತೆಯ ಕ್ರಮ ವಹಿಸಬೇಕು. ಅಂಗನವಾಡಿ, ಶಾಲೆ ಮತು ಹಾಸ್ಟೆಲ್ಗಳಲ್ಲಿ ನೀರಿನ ಟ್ಯಾಂಕ್ಗಳನ್ನು ಸ್ವಚ್ಚ ಮಾಡಿ ಬಳಸಬೇಕು ಎಂದು ಶಿವಮೊಗ್ಗ ತಹಶೀಲ್ದಾರ್ ಗೀರಿಶ್ ಎಂ. ಎನ್. ಸೂಚನೆ ನೀಡಿದರು.
ಮೇ -೧೭ ರಂದು ಶಿವಮೊಗ್ಗ ತಾಲ್ಲೂಕು ಕಛೇರಿ ಸಭಾಂಗಣದಲ್ಲಿ ತಾಲ್ಲೂಕಿನ ಸಂಬಂದ ಪಟ್ಟ ಎಲ್ಲಾ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಇವರು, ಬರ ಪರಿಹಾರ ಕೆಲಸದಲ್ಲಿ ರೈತರು ಕಛೇರಿಗೆ ಬೇಟಿ ನೀಡಿದಾಗ ಸಮಾಧಾನ ಮತ್ತು ಸಂಯಮಯಿಂದ ಕೆಲಸ ಮಾಡಿಕೊಡಿ.
ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ತಮಗೆ ನಿರ್ವಹಿಸಿದ ಕೆಲಸವನ್ನು ನಿಷ್ಠೆ ಮತ್ತು ಜವಾಬ್ದಾರಿಯಿಂದ ಮಾಡಬೇಕು ಎಂದು ತಿಳಿಸಿದರು.
ಶಾಲೆ ಮತ್ತು ಅಂಗನವಾಡಿಗಳಲ್ಲಿ ಕಡ್ಡಾಯವಾಗಿ ಕುಡಿಯುವ ನೀರಿನ ಟೆಸ್ಟ್ ಮಾಡಿಸಿ ಬಳಕೆ ಮಾಡ ಬೇಕು. ಶೌಚಾಲಯಗಳನ್ನು ಸುಚಿತ್ವದಿಂದ ಕಾಪಾಡಿ ಕೊಂಡು ಮಕ್ಕಳನ್ನು ಆರೋಗ್ಯವಂತರಾಗಿ ಇಡುವುದು ನಮ್ಮ ಕರ್ತವ್ಯವಾಗಿದೆ. ಎಲ್ಲರು ಡೆಂಗ್ಯುಯಿಂದ ರಕ್ಷಣೆಗೆ ಸುರಕ್ಷಿತ ಕ್ರಮವನ್ನು ತೆಗೆದುಕೂಂಡು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದ ಅವರು ಶಾಲೆ ಮತ್ತು ಅಂಗನವಾಡಿಗಳಿಗೆ ಬಣ್ಣ ಬಳಿಸುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.