![](https://www.chandravallinews.com/wp-content/uploads/2024/05/Trining-6-1024x472.jpg)
i
ಮೇ.28ರಂದು ಸಮಗ್ರ ಪೋಷಕಾಂಶಗಳ ನಿರ್ವಹಣೆ ಕುರಿತು ತರಬೇತಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹಿರಿಯೂರು ತಾಲ್ಲೂಕಿನ ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಮೇ.28ರಂದು ಬೆಳಿಗ್ಗೆ 10ಕ್ಕೆ ಜಿಲ್ಲೆಯ ರೈತರಿಗೆ “ಕೃಷಿ ಮತ್ತು ತೋಟಗಾರಿಕೆ ಬೆಳೆಗಳಲ್ಲಿ ಸಮಗ್ರ ಪೋಷಕಾಂಶಗಳ ನಿರ್ವಹಣೆ” ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ತರಬೇತಿ ಕಾರ್ಯಕ್ರಮದಲ್ಲಿ ಬಬ್ಬೂರುಫಾರಂ ಕೃಷಿ ವಿಜ್ಞಾನ ಕೇಂದ್ರದ ಮಣ್ಣು ವಿಜ್ಞಾನಿ ಡಾ.ಡಿ.ರವಿಕುಮಾರ್ ಅವರು ಮಣ್ಣು ಮತ್ತು ನೀರು ಪರೀಕ್ಷೆ ಮಹತ್ವ, ಮಣ್ಣು ಮತ್ತು ನೀರು ಮಾದರಿ ತೆಗೆಯುವ ವಿಧಾನ, ಮಣ್ಣು ಪರೀಕ್ಷೆ ಆಧಾರಿತ ಪೋಷಕಾಂಶಗಳ ಶಿಫಾರಸ್ಸು, ಪ್ರಮುಖ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಲ್ಲಿ ಪೋಷಕಾಂಶಗಳ ಕೊರತೆಯ ಲಕ್ಷಣ ಮತ್ತು ಅವುಗಳ ಸಮಗ್ರ ನಿರ್ವಹಣೆ ಕುರಿತು ವಿಷಯ ಮಂಡನೆ ಮಾಡುವರು.
ಆಸಕ್ತ 50 ಜನ ರೈತಭಾಂದವರು ತರಬೇತಿಯಲ್ಲಿ ಭಾಗವಹಿಸಲು ರಜನೀಕಾಂತ. ಆರ್, ಸಹಾಯಕ ಕೃಷಿ ನಿರ್ದೇಶಕರು, ಜಿಲ್ಲಾ ಕೃಷಿ ತರಬೇತಿಕೇಂದ್ರ, ಬಬ್ಬೂರು ಫಾರಂ (9980642458), ಉಷಾರಾಣಿ ಎಂ., ಸಹಾಯಕ ಕೃಷಿ ನಿರ್ದೇಶಕರು (ರೈ.ಮ) (9980730696), ಸಿಕಂದರ್ ಬಾಷಾ, ಕೃಷಿ ಅಧಿಕಾರಿ (9845249832) ಮತ್ತು ಪವಿತ್ರಾ ಎಂ. ಜೆ. (9535412286) ಅವರ ದೂರವಾಣಿ ಸಂಖ್ಯೆಗೆ ಕರೆ ಮಾಡಿ ತಮ್ಮ ಫ್ರೂಟ್ಸ್ ಐಡಿಯೊಂದಿಗೆ ನೋಂದಾಯಿಸಿ ತರಬೇತಿಯ ಸದುಪಯೋಗ ಪಡೆದುಕೊಳ್ಳಲು ಕೋರಿದೆ.
ಮೊದಲು ನೋಂದಾವಣಿ ಮಾಡಿಕೊಂಡ 50 ಜನ ರೈತಭಾಂದವರಿಗೆ ಆದ್ಯತೆ ಮೇರೆಗೆ ತರಬೇತಿಗೆ ಪರಿಗಣಿಸಲಾಗುವುದು ಹಾಗೂ ತರಬೇತಿಗೆ ಹಾಜರಾಗುವ ರೈತಬಾಂಧವರು ತಮ್ಮ ಫ್ರೂಟ್ಸ್ಐಡಿಯನ್ನು (FID) ಕಡ್ಡಾಯವಾಗಿ ತರಲು ಕೋರಿದೆ.
ರಾಜ್ಯದ ವಿವಿಧ ಭಾಗಗಳ ಆಸಕ್ತ ರೈತ ಬಾಂಧವರು ಕೃಷಿ ಮತ್ತು ಕೃಷಿ ಸಂಬಂಧಿತ ವಿಷಯಗಳ ಕುರಿತು ಗೂಗಲ್ ಮೀಟ್ ಮೂಲಕ ಆಯೋಜಿಸಲಾಗುವ ವಿವಿಧ ತರಬೇತಿಗಳಿಗೆ ಹಾಜರಾಗಲು ಮಾಹಿತಿಗಾಗಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಫೇಸ್ಬುಕ್ ಸೇರಲು ತಮ್ಮ ಫೇಸ್ಬುಕ್ಖಾತೆಯಿಂದ DatcBabbur ಎಂದು ಹುಡುಕಿ add friend ಬಟನ್ಒತ್ತಿ ಫೇಸ್ಬುಕ್ ಸೇರಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.