![](https://www.chandravallinews.com/wp-content/uploads/2024/06/gold.jpeg)
i
ಕದ್ದ ಚಿನ್ನಅಡವಿಟ್ಟು ಸಾಲ ಪಡೆದ ಮಹಿಳೆ ಬಂಧನ…
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ :
ಕದ್ದ ಚಿನ್ನದ ಆಭರಣವನ್ನ ತನ್ನದು ಎಂದು ನಂಬಿಸಿ ಅಡವಿಟ್ಟು ಹಣ ಪಡೆದಿದ್ದ ಮಹಿಳೆ ವಿರುದ್ಧ ಮಣಪ್ಪುರಂ ಫೈನಾನ್ಸ್ಸಂಸ್ಥೆ ದೂರು ನೀಡಿದೆ.
ಪೂಜಾ ಎಂಬಾಕೆ 2022ರಲ್ಲಿ 25.6 ಗ್ರಾಂ ಚಿನ್ನದ ಆಭರಣವನ್ನು ಮಣಪ್ಪುರಂ ಫೈನಾನ್ಸ್ಸಂಸ್ಥೆಯಲ್ಲಿ ಅಡವಿಟ್ಟಿದ್ದಳು. 84 ಸಾವಿರ ರೂ. ಸಾಲದ ಹಣ ಪಡೆದಿದ್ದಳು ಎಂದು ಆರೋಪಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ಠಾಣೆ ಪೊಲೀಸರು, ಪೂಜಾ ಅಡವಿಟ್ಟ ಚಿನ್ನ ಕಳ್ಳತನದ್ದು ಎಂದು ಆರೋಪಿಸಿ ವಶಕ್ಕೆ ಪಡೆದಿದ್ದರು. ಕಳ್ಳತನದ ಚಿನ್ನವನ್ನು ತನ್ನದೆಂದು ನಂಬಿಸಿ ತಮ್ಮ ಸಂಸ್ಥೆಗೆ ಮೋಸ ಮಾಡಿದ್ದಾಳೆ ಎಂದು ಆರೋಪಿಸಿ, ಆಕೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಣಪ್ಪುರಂ ಫೈನಾನ್ಸ್ಸಂಸ್ಥೆ ಶಿವಮೊಗ್ಗ ನ್ಯಾಯಾಲಯಕ್ಕೆ ದೂರು ಸಲ್ಲಿಸಿತ್ತು. ನ್ಯಾಯಾಲಯದ ಸೂಚನೆ ಮೇರೆಗೆ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ