![](https://www.chandravallinews.com/wp-content/uploads/2024/06/IMG_20240611_062557.jpg)
i
ರಾಜ್ಯ ಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ
ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ :
ನಗರದ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಮತ್ತು ಜಿಲ್ಲಾ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಸಹಯೋಗ ದಲ್ಲಿ ಜೂ.೧೧ರ ಮಂಗಳವಾರ ಆದಿಚುಂಚನ ಸಮುದಾಯ ಭವನದಲ್ಲಿ ೧೯ನೇ ರಾಜ್ಯಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಏರ್ಪಡಿಸಲಾಗಿದೆ .
ಪತ್ರಿಕಾಭವನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಸಾಸಾಂ ವೇದಿಕೆ ಅಧ್ಯಕ್ಷ ಡಿ. ಮಂಜುನಾಥ ಈ ಬಗ್ಗೆ ಮಾಹಿತಿ ನೀಡಿದರು.
ಬೆಳಗ್ಗೆ ೧೦ಕ್ಕೆ ನಡೆಯುವ ಉದ್ಘಾಟನಾ ಸಮಾ ರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದು ಸಾಗರದ ವೈಬ್ರೆಂಟ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಮಾನ್ವಿ ಕರೂರು ಸರ್ವಾಧ್ಯಕ್ಷತೆ ಯಲ್ಲಿ ಸಮ್ಮೇಳನ ನಡೆಯಲಿದೆ. ಉಡುಪಿ ಜಿಲ್ಲೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದ ಪಿಯು ವಿದ್ಯಾರ್ಥಿನಿ ಪವಿತ್ರಾ ದೇವಾಡಿಗ ಸಮ್ಮೇಳನ ಉದ್ಘಾಟಿಸಲಿದ್ದು, ವೇದಿಕೆ ಅಧ್ಯಕ್ಷ ಡಿ. ಮಂಜುನಾಥ ಪ್ರಾಸ್ತಾವಿಕ ಮಾತುಗಳನ್ನಾಡಲಿದ್ದಾರೆ ಎಂದರು.
ಮೊದಲ ವಿಚಾರಗೋಷ್ಠಿಯಲ್ಲಿ ಆದಿಚುಂಚನ ಗಿರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಮಧುಸೂದನ್ ಅಧ್ಯಕ್ಷತೆ ವಹಿಸಲಿದ್ದು, ನಂತರ ನಡೆ ಯುವ ಕವಿಗೋಷ್ಠಿ ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ವಿದ್ಯಾರ್ಥಿ ದಿಗಂತ್ ಪ್ರಸಾದ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಕ್ಕಳು ಕಥೆ ಹೇಳುತ್ತಾರೆ ಗೋಷ್ಠಿಯಲ್ಲಿ ಸಾಗರದ ಅಂಕಿತಾ ಸಾಗರ ಅಧ್ಯಕ್ಷತೆ ವಹಿಸಲಿದ್ದು, ಪಾಂಡವಪುರದ ಅಪೇಕ್ಷಾ ಅಧ್ಯಕ್ಷತೆ ಯಲ್ಲಿ ಪ್ರಬಂಧ ಗೋಷ್ಠಿ ನಡೆಯಲಿದೆ. ಶಿಗ್ಗಾವಂನ ಅನುಷಾ ಕೆ. ಹಿರೇಮಠ ಅವರು ಸಮಾರೋಪ ಮಾತುಗಳ ನ್ನಾಡಲಿದ್ದಾರೆ ಎಂದು ಹೇಳಿದರು.
ರಾಜ್ಯದ ವಿವಿಧ ಜಿಲ್ಲೆಗಳ ಸುಮಾರು ನೂರಕ್ಕು ಹೆಚ್ಚು ಪ್ರತಿಭಾವಂತ ಸಾಹಿತ್ಯಾಸಕ್ತ ವಿದ್ಯಾರ್ಥಿಗಳು ವಿವಿಧ ಗೋಷ್ಠಿಗಳಲ್ಲಿ ಭಾಗವಹಿಸಲಿದ್ದು, ವಿವಿಧ ಶಾಲೆಗಳ ಒಂದು ಸಾವಿರ ವಿದ್ಯಾರ್ಥಿಗಳು ಸಮ್ಮೇ ಳನದಲ್ಲಿ ಭಾಗವಹಿಸಲಿದ್ದಾರೆ ಎಂದು ಡಿ. ಮಂಜು ನಾಥ ವಿವರಿಸಿದರು.
ಇದೇ ಸಂದರ್ಭದಲ್ಲಿ ಲೇಖಕಿ ಭವ್ಯಾ ಸುಧಾಕರ ಬರೆದಿರುವ ಪುಟಾಣಿ ಸಂಜೆ ಪುಸ್ತಕ ಎಂದರು.