i
ಉಪನ್ಯಾಸಕಿ ಆರತಿ ಆತ್ಮಹತ್ಯೆ, ಕಾರಣ ಕೇಳಿದರೆ ಬೆಚ್ಚಿ ಬೀಳುತ್ತೀರಿ…
ಚಂದ್ರವಳ್ಳಿ ನ್ಯೂಸ್ ಬೀದರ್:
ಉಪನ್ಯಾಸಕಿಯೊಬ್ಬಳು ಆನ್ಲೈನ್ನಲ್ಲಿ ಮೋಸ ಹೋಗಿದ್ದರಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಇಸ್ಲಾಂಪುರ್ ಗ್ರಾಮದಲ್ಲಿ ನಡೆದಿದೆ.
ಆನ್ಲೈನ್ನಲ್ಲಿ ಇನ್ವೆಸ್ಟ್ ಮಾಡಿದ್ದ ಹಣ ವಾಪಸಾಗುವ ಯಾವುದೇ ಲಕ್ಷಣಗಳ ಕಂಡು ಬಾರದ ಹಿನ್ನೆಲೆಯಲ್ಲಿ ಉಪನ್ಯಾಸಕಿ ಆರತಿ ಕನಾಟೆ(28) ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲಸೋಲ ಮಾಡಿ ಆನ್ಲೈನ್ನಲ್ಲಿ 2.50 ಲಕ್ಷ ರೂ. ಇನ್ವೆಸ್ಟ್ ಮಾಡಿ ಈಗ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಉಪನ್ಯಾಸಕಿ ಆರತಿ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಬಸವಕಲ್ಯಾಣ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.