i
ಬಿಜೆಪಿ ಪಕ್ಷದ ಮುಂದಿನ ಮುಖ್ಯಮಂತ್ರಿ ನಿರ್ಮಲಾನಂದನಾಥ ಸ್ವಾಮೀಜಿ!?…
ಚಂದ್ರವಳ್ಳಿ ನ್ಯೂಸ್, ಮೈಸೂರು:
ಕರ್ನಾಟಕದ ರಾಜಕೀಯ ಚಿತ್ರಣ ಸಂಪೂರ್ಣ ಬದಲಾಗುವ ಸಾಧ್ಯತೆ ನಿಚ್ಚಳವಾಗಿದೆ. ಉತ್ತರ ಪ್ರದೇಶ ಮಾದರಿಯಲ್ಲಿ ಕರ್ನಾಟಕ ರಾಜ್ಯದಲ್ಲೂ ಧಾರ್ಮಿಕ ಗುರುಪೀಠಾಧಿಪತಿಯೊಬ್ಬರನ್ನು ಮುಖ್ಯಮಂತ್ರಿಗಳನ್ನಾಗಿ ಮಾಡಲಲು ಬಿಜೆಪಿ ಪಕ್ಷ ಮುಂದಾಗಿದೆ ಎನ್ನುವ ಸುದ್ದಿ ಹರಡುತ್ತಿದೆ.
ಈ ಕುರಿತು ಮೈಸೂರಿನ ಪ್ರೊ.ಮಹೇಶ್ಚಂದ್ರ ಗುರು ತೀವ್ರ ಆಕ್ಷೇಪ ವ್ಯಕ್ತ ಪಡಿಸಿದ್ದು ಆದಿಚುಂಚನಗಿರಿಯ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸುವ ಮೂಲಕ ಬಿಜೆಪಿ ಜಾತಿ ರಾಜಕಾರಣಕ್ಕೆ ಮುಂದಾಗಿದೆ ಎಂದು ತಿಳಿಸಿದರು.
ಒಕ್ಕಲಿಗರ ಮತ ಸೆಳೆಯುವ ಹುನ್ನಾರ ಮಾಡುತ್ತಿರುವ ಬಿಜೆಪಿ ಸ್ವಾಮೀಜಿ ಅವರನ್ನು ಮುಂದಿಟ್ಟುಕೊಂಡು ಒಕ್ಕಲಿಗರ ಮತ ಸೆಳೆಯುವ ತಂತ್ರಗಾರಿಕೆ ಮಾಡುತ್ತಿದ್ದು ಸಾಮಾಜಿಕ ನ್ಯಾಯವನ್ನು ಧೂಳೀಪಟ ಮಾಡಲು ಎನ್ಡಿಎ ನಾಯಕರು ಮುಂದಾಗಿದ್ದಾರೆ. ಕುವೆಂಪು, ಬಸವಣ್ಣ, ದೇವರಾಜ ಅರಸು ನಾಡು ಇದಾಗಿದ್ದು ಜಾತಿ ರಾಜಕೀಯ ನಡೆಯುವುದಿಲ್ಲ. ಈ ಕುರಿತು ಸಂಬಂಧಿಸಿದವರು ಎಚ್ಚರವಹಿಸಬೇಕು ಎಂದು ಮೈಸೂರಿನಲ್ಲಿ ಅವರು ಸುದ್ದಿಗಾರರ ಜೊತೆ ಮಾತನಾಡಿ ತಿಳಿಸಿದರು.
ಆದಿ ಚುಂಚನಗಿರಿ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಆಧ್ಯಾತ್ಮ, ಸಂಸ್ಕೃತಿ, ಶಿಕ್ಷಣ ಕ್ಷೇತ್ರದಲ್ಲಿ ಮುಂದುವರಿಯಲು ಬಿಡಿ. ಅದರಿಂದ, ಒಕ್ಕಲಿಗ ಜಾತಿಗಷ್ಟೇ ಅಲ್ಲದೆ ರೈತರಿಗೂ ಅನುಕೂಲವಾಗಲಿದೆ. ಇದು ರಾಜಕೀಯ ಸಂಚು ಆಗಿದ್ದು, ಈ ಬಗ್ಗೆ ಎಚ್ಚರವಹಿಸಬೇಕು, ಸ್ವಾಮೀಜಿಗಳಿಗೆ ರಾಜಕೀಯ ಬೇಡ ಎಂದು ಅವರು ಸಲಹೆ ನೀಡಿದರು.