i
ಜ.27ರಂದು “ನಿಧಿ ಆಪ್ಕೆ ನಿಕಟ್” ಕಾರ್ಯಕ್ರಮ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆ, ಪ್ರಾದೇಶಿಕ ಕಚೇರಿ ಬಳ್ಳಾರಿ ವತಿಯಿಂದ “ನಿಧಿ ಆಪ್ಕೆ ನಿಕಟ್: ಭವಿಷ್ಯ ನಿಧಿ ನಿಮ್ಮ ಹತ್ತಿರಕ್ಕೆ” ಕಾರ್ಯಕ್ರಮದ ವಿಸ್ತೃತ ಮತ್ತು ಬಲಪಡಿಸಿದ ಆವೃತ್ತಿಯನ್ನು ಇದೇ ಜನವರಿ 27ರಂದು ಬೆಳಿಗ್ಗೆ 9 ರಿಂದ ಸಂಜೆ 6 ರವರೆಗೆ ಚಿತ್ರದುರ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮವು ಕಾರ್ಮಿಕರ, ಪಿಂಚಣಿದಾರರ ಮತ್ತು ಉದ್ಯೋಗದಾತರ ಕುಂದುಕೊರತೆ ಪರಿಹಾರ ಮತ್ತು ಮಾಹಿತಿ ವಿನಿಯಮಕ್ಕೆ ವಿಶಾಲ ವೇದಿಕೆಯಾಗಿ ಅರಿವು ಮೂಡಿಸುವ ಮತ್ತು ಪ್ರಭಾವ ಬೀರುವ ಕಾರ್ಯಕ್ರಮವಾಗಿದೆ. ಹೊಸದಾಗಿ ನೋಂದಾಯಿಸಿರುವ ಉದ್ಯೋಗದಾತರ ಕರ್ತವ್ಯಗಳು ಮತ್ತು ಜವಾಬ್ದಾರಿಗಳ ಅರಿವು, ಕಾರ್ಮಿಕರಿಗೆ, ಉದ್ಯೋಗದಾತರಿಗೆ, ಪ್ರಧಾನ ಉದ್ಯೋಗದಾತರಿಗೆ ಮತ್ತು ಗುತ್ತಿಗೆದಾರರಿಗೆ ಲಭ್ಯವಿರುವ ಆನ್ಲೈನ್ ಸೇವೆಗಳ ಮಾಹಿತಿ, ಹೊಸ ಉಪಕ್ರಮಗಳು, ಸುಧಾರಣೆಗಳ ಮಾಹಿತಿ ಒದಗಿಸಲಾಗುವುದು.
ಎಲ್ಲಾ ಕಾರ್ಮಿಕರು, ಪಿಂಚಣಿದಾರರು, ಉದ್ಯೋಗದಾತರು ಕಾರ್ಯಕ್ರಮಕ್ಕೆ ಹಾಜರಾಗಿ ಪ್ರಯೋಜನ ಪಡೆಯಬೇಕು ಎಂದು ಬಳ್ಳಾರಿ ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತ ಕೆ.ವೆಂಕಟ ಸುಬ್ಬಯ್ಯ ತಿಳಿಸಿದ್ದಾರೆ.