i
ವಸತಿ ನಿಲಯದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು…
ಚಂದ್ರವಳ್ಳಿ ನ್ಯೂಸ್, ಬೀದರ್:
ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮುಡಬಿ ಗ್ರಾಮದ ಇಂದಿರಾ ಗಾಂಧಿ ವಸತಿ ನಿಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆಯನ್ನು ಸಮಗ್ರ ತನಿಖೆ ನಡೆಸಬೇಕು ಎಂದು ಗೊಂಡ ವಿದ್ಯಾರ್ಥಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸಂತೋಷ ಜೋಳದಾಪಕೆ ಆಗ್ರಹಿಸಿದ್ದಾರೆ.
ವಸತಿ ನಿಲಯದಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಓದುತ್ತಿದ್ದ ಹಣಮಂತವಾಡಿ ಗ್ರಾಮದ ಅಂಗವಿಕಲ ವಿದ್ಯಾರ್ಥಿ ಪವನ್ ನಾಗಪ್ಪ ಸಿಂಧನಕೇರಾ ಅವರ ಶವ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಇದೊಂದು ಅನುಮಾಸ್ಪದ ಸಾವಾಗಿದ್ದು ಸಮಗ್ರ ತನಿಖೆ ಮಾಡುವಂತೆ ಅವರು ಒತ್ತಾಯಿಸಿದ್ದಾರೆ.
ವಿದ್ಯಾರ್ಥಿಯ ಸಾವಿನ ಸತ್ಯ ಹೊರಬರಬೇಕು ಅಲ್ಲದೆ ವಿದ್ಯಾರ್ಥಿ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.