i
ಮೈಸೂರಿನ ರಾಮಕೃಷ್ಣ ವಿದ್ಯಾಶಾಲೆಗೆ 8ನೇ ತರಗತಿ ಪ್ರವೇಶಕ್ಕೆ ಅರ್ಜಿ ಅಹ್ವಾನ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮೈಸೂರಿನಲ್ಲಿರುವ ಶ್ರೀ ರಾಮಕೃಷ್ಣ ವಿದ್ಯಾಶಾಲೆಗೆ 2023-24 ನೇ ಸಾಲಿಗೆ ಪರಿಶಿಷ್ಟ ವರ್ಗದ ಗಂಡು ಮಕ್ಕಳಿಗೆ 8ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 31 ಅರ್ಜಿ ಸಲ್ಲಿಸಲು ಕೊನೆಯ ದಿನ.
ಪ್ರವೇಶ ಪರೀಕ್ಷೆಯನ್ನು ಏಪ್ರಿಲ್ 20 ರಂದು ಬೆಳ್ಳಿಗೆ 10 ಗಂಟೆಗೆ ನಡೆಸಲಾಗುವುದು. ಮಾರ್ಚ್ 21 ರಿಂದ 31 ರವರಗೆ ಆಯಾ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು, ಚಿತ್ರದುರ್ಗ, ಚಳ್ಳಕೆರೆ, ಮೊಳಕಾಲ್ಮುರು ಹಾಗೂ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು ತಾಲ್ಲೂಕು ಅವರಿಂದ ಅರ್ಜಿಯನ್ನು ಪಡೆದು ಮಾರ್ಚ್ 31 ರಂದು ಸಂಜೆ 5.30 ರ ಒಳಗೆ ಸಲ್ಲಿಸಬೇಕು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪರಿಶಿಷ್ಟ ವರ್ಗಕ್ಕೆ ಸೇರಿದವರಿರಬೇಕು, ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ಗಂಡು ಮಕ್ಕಳಿಗೆ ಮಾತ್ರ ಪ್ರವೇಶ ಪರೀಕ್ಷೆಗೆ ಆಯ್ಕೆ ಮಾಡಲಾಗುವುದು, 7ನೇ ತರಗತಿ ವಾರ್ಷಿಕ ಪರೀಕ್ಷೆಯ ಅಂಕಪಟ್ಟಿಯ ಜೆರಾಕ್ಸ್ ಮತ್ತು 6 ಮತ್ತು 7ನೇ ತರಗತಿಯಲ್ಲಿನ ಪಠ್ಯೇತರ ಚಟುವಟಿಕೆಗಳ ಪ್ರಮಾಣಪತ್ರಗಳ ಜೆರಾಕ್ಸ್ಯನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು. ಹಾಗೂ ಅರ್ಜಿ ನಮೂನೆಯಲ್ಲಿ ಕಡ್ಡಾಯವಾಗಿ ಮೊಬೈಲ್ ನಂಬರ್ನ್ನು ನಮೂದಿಸುವುದು ಮೂಲ ವಾರ್ಷಿಕ ಪರೀಕ್ಷೆಯ ಅಂಕಪಟ್ಟಿಯನ್ನು ಸಂದರ್ಶನದ ಸಮಯದಲ್ಲಿ ನೀಡಬೇಕಾಗುತ್ತದೆ. ಪ್ರವೇಶಾತಿಯನ್ನು 7ನೇ ತರಗತಿಯ ವಿಜ್ಞಾನ ಮತ್ತು ಗಣಿತದ ಜೊತೆಗೆ ಸಾಮಾನ್ಯ ಇಂಗ್ಲೀಷ್ ವಿಷಯಗಳಲ್ಲಿ ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನಗಳ ಆಧಾರದ ಮೇಲೆ ನಿರ್ಧರಿಸಲಾಗುವುದು. ವಿದ್ಯಾರ್ಥಿಗಳು ಇಂಗ್ಲೀಷ್ ಅಥವಾ ಕನ್ನಡ ಮಾಧ್ಯಮಗಳಲ್ಲಿ ಪ್ರವೇಶ ಪರೀಕ್ಷೆಯನ್ನು ತೆಗೆದುಕೊಳ್ಳಬಹುದು. ಅರ್ಜಿಯೊಂದಿಗೆ ಸಲ್ಲಿಸಿರುವ ಎಲ್ಲಾ ದಾಖಲಾತಿಗಳನ್ನು ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಬೇಕು, ಹಾಗೂ ಅರ್ಜಿಗಳನ್ನು ಮಾ. 31 ರೊಳಗಾಗಿ ಸಲ್ಲಿಸತಕ್ಕದ್ದು, ತದನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಪ್ರವೇಶ ಪರೀಕ್ಷೆ ಬರೆಯಲು ಇಚ್ಛಿಸುವ ವಿದ್ಯಾರ್ಥಿಗಳು ಅರ್ಜಿ ಹಾಗೂ ಪರೀಕ್ಷೆಗೆ ಸಂಬಂಧಿಸಿದ ಪಠ್ಯಸೂಚಿಕೆಗಳನ್ನು ಆಯಾ ತಾಲ್ಲೂಕಿಗೆ ಸಂಬಂಧಪಟ್ಟ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು, ಚಿತ್ರದುರ್ಗ, ಚಳ್ಳಕೆರೆ, ಮೊಳಕಾಲ್ಕೂರು ಹಾಗೂ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಹೊಸದುರ್ಗ,ಹೊಳಲ್ಕೆರೆ, ಹಿರಿಯೂರು ಅವರಿಂದ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.