i
ಲಿಂಗಾಯತ ಜಾತಿಯವರೆಲ್ಲ ಭ್ರಷ್ಟರೆಂದು ಹೇಳಿಲ್ಲ, ಬೊಮ್ಮಾಯಿ ಭ್ರಷ್ಟರು ಎಂದಿದ್ದೇನೆ-ಸಿದ್ದರಾಮಯ್ಯ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮಾತ್ರ ಭ್ರಷ್ಟ ಸಿಎಂ ಅಂತಾ ಹೇಳಿದ್ದೇನೆ. ಆದರೆ ಲಿಂಗಾಯತ ಸಮುದಾಯದವರು ಭ್ರಷ್ಟರೆಂದು ಹೇಳಿಲ್ಲ. ಆ ಸಮುದಾಯದ ಬಗ್ಗೆ ಅಪಾರ ಗೌರವವಿದೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಬಸವರಾಜ ಬೊಮ್ಮಾಯಿಗೆ ಮಾತ್ರ ಭ್ರಷ್ಟ ಸಿಎಂ ಅಂತಾ ಹೇಳಿದ್ದೇನೆ. ನನ್ನ ಹೇಳಿಕೆ ತಿರುಚಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಈ ಹಿಂದೆ ಸಿಎಂ ಆಗಿದ್ದ ಲಿಂಗಾಯತ ಸಮಾಜದವರು ಪ್ರಮಾಣಿಕರಾಗಿದ್ದರು. ನಿಜಲಿಂಗಪ್ಪ, ವೀರೇಂದ್ರ ಪಾಟೀಲ್, ಜೆ.ಹೆಚ್.ಪಟೇಲ್, S.R.ಕಂಠಿ ಸೇರಿ ಲಿಂಗಾಯತ ಸಮುದಾಯದ ಸಿಎಂಗಳು ಅತ್ಯಂತ ಹಾನೆಸ್ಟ್ ಆಗಿದ್ದರು. ನನ್ನ ಹೇಳಿಕೆಯನ್ನು ಬಿಜೆಪಿ ಸೋಷಿಯಲ್ ಮೀಡಿಯಾ ತಿರುಚುತ್ತಿದೆ. ಚುನಾವಣೆ ಹಿನ್ನೆಲೆ ನನ್ನ ಹೇಳಿಕೆ ತಿರುಚಿ ಲಾಭ ಪಡೆಯಲು ಪ್ರಯತ್ನಿಸುತ್ತಿದೆ. ಲಿಂಗಾಯತರ ಮೇಲೆ ವಿಶ್ವಾಸ ಇಲ್ಲದಿದ್ದರೆ ಏಕೆ ಇಷ್ಟು ಸೀಟ್ ನೀಡುತ್ತಿದ್ದೆವು ಎಂದು ಅವರು ಪ್ರಶ್ನಿಸಿದ್ದಾರೆ.