i
ವಿಧಾನಸಭಾಧ್ಯಕ್ಷರಾಗಿ ಎನ್.ವೈ.ಗೋಪಾಲಕೃಷ್ಣ ಆಯ್ಕೆ ಸಾಧ್ಯತೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯದ ವಿಧಾನಸಭೆ ಶಾಸನ ಸಭೆಯ ಕೆಳಮನೆಯಾಗಿದೆ. ವಿಧಾನ ಸಭೆಯ ಕೆಳಮನೆಯ ಸಭಾಧ್ಯಕ್ಷರಾಗಿ ಕೋಟೆ ನಾಡಿನ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಹಿರಿಯ ಶಾಸಕ ಎನ್.ವೈ.ಗೋಪಾಲಕೃಷ್ಣ ಅವರು ಆಯ್ಕೆಯಾಗುವ ಸಾಧ್ಯತೆ ಹೆಚ್ಚಿದೆ.
ಕರ್ನಾಟಕ ವಿಧಾನಸಭೆಯಲ್ಲಿ 224 ಸದಸ್ಯರಿದ್ದು ಈ ಕೆಳಮನೆ ಸದನವನ್ನು ಮುನ್ನಡೆಸಲು ಸೂಕ್ತ ವ್ಯಕ್ತಿ ಯಾರೆಂದು ಕಾಂಗ್ರೆಸ್ ತಲಾಶೆ ಮಾಡುವ ಸಂದರ್ಭದಲ್ಲಿ ನಾಲ್ಕೈದು ಹೆಸರುಗಳು ಚರ್ಚೆಗೆ ಬಂದಿದ್ದು ಕೊನೆಯದಾಗಿ ಕಾಂಗ್ರೆಸ್ ಪಕ್ಷದ ಅತ್ಯಂತ ಹಿರಿಯ ಶಾಸಕರಾದ ಎನ್.ವೈ.ಗೋಪಾಲಕೃಷ್ಣ ಅವರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಸಭಾಧ್ಯಕ್ಷರ ಹುದ್ದೆಯನ್ನು ಒಪ್ಪುವುದು ಬಿಡುವುದು ಗೋಪಾಲಕೃಷ್ಣ ಅವರಿಗೆ ಸೇರಿದ್ದು, ಆದರೆ ಸಿದ್ದರಾಮಯ್ಯ ಈಗಾಗಲೇ ಒಂದು ಪಟ್ಟಿ ತಯಾರಿಸಿದ್ದು ಗೋಪಾಲಕೃಷ್ಣ ಸಭಾಧ್ಯಕ್ಷರಾಗಿ ಆಯ್ಕೆ ಆಗುವ ಸಾಧ್ಯತೆ ಹೆಚ್ಚಿದೆ ಎನ್ನಲಾಗುತ್ತಿದೆ.