i
ಚಳ್ಳಕೆರೆ ಕ್ಷೇತ್ರದ ಮತದಾರರ ಸೇವಕನಾಗಿ ಕಾರ್ಯ ಮಾಡುವೆ-ಶಾಸಕ ಟಿ.ರಘುಮೂರ್ತಿ…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಹ್ಯಾಟ್ರಿಕ್ ವಿಜಯ ಸಾಧಿಸಿದ ನಂತರ ಭಾನುವಾರ ಶಾಸಕರ ಭವನಕ್ಕೆ ಆಗಮಿಸಿದ ಶಾಸಕ ಟಿ.ರಘುಮೂರ್ತಿಯವರನ್ನು ಪಕ್ಷದ ಕಾರ್ಯಕರ್ತರು,ಮುಖಂಡರು, ಅಭಿಮಾನಿಗಳು, ವಿವಿಧ ಇಲಾಖೆಯ ಸರ್ಕಾರಿ ಅಧಿಕಾರಿಗಳು, ಸಂಘ ಸಂಸ್ಥೆಯ ಪ್ರತಿನಿಧಿಗಳು ಸ್ವಾಗತ ಬಯಸಿದರು.
ಶಾಸಕರ ಆಗಮನದ ಸುದ್ದಿ ತಿಳಿದ ಕೂಡಲೇ ಶಾಸಕರ ಭವನವೇ ಜನರಿಂದ ತುಂಬಿತ್ತು. ಕ್ಷೇತ್ರದ ವಿವಿಧ ಹಳ್ಳಿಗಳಿಂದ ತಂಡವಾಗಿ ಬಂದಿದ್ದ ಪಕ್ಷದ ಅಭಿಮಾನಿಗಳು ತಮ್ಮ ನೆಚ್ಚಿನ ಶಾಸಕ ರಘುಮೂರ್ತಿಗೆ ಶಾಲು ಹೊದಿಸಿ, ಪುಪ್ಪಹಾರ ಹಾಗೂ ಜಯಕಾರ ಕೂಗಿ ಗೌರವಿಸಿದರು. ಸುಮಾರು ಎರಡು ಗಂಟೆಗಳಿಗೂ ಹೆಚ್ಚು ಕಾಲ ಬಿಡುವಿಲ್ಲದೆ ಶಾಸಕರ ಭವನದಲ್ಲಿ ಅಧಿಕಾರಿಗಳು ಹಾಗೂ ಕಾರ್ಯಕರ್ತರಿಂದ ಶುಭಾಶಯಗಳನ್ನು ಸ್ವೀಕರಿಸಿದರು.
ಜಿಲ್ಲಾ ಹೆಚ್ಚುವರಿ ರಕ್ಷಣಾಧಿಕಾರಿ ಕುಮಾರಸ್ವಾಮಿ, ತಹಶೀಲ್ಧಾರ್ ರೇಹಾನ್ಪಾಷ, ಇನ್ಸ್ಪೆಕ್ಟರ್ ಆರ್.ಎಫ್.ದೇಸಾಯಿ, ಪಿಎಸ್ಐ ಸತೀಶ್ನಾಯ್ಕ, ನಗರಸಭೆ ಅಧ್ಯಕ್ಷೆ, ಉಪಾಧ್ಯಕ್ಷೆ ಹಾಗೂ ಸದಸ್ಯರು ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಲಿಂಗೇಗೌಡ, ತಾಲ್ಲೂಕು ಶಿಕ್ಷಕರ ಸಂಘದ ಪ್ರತಿನಿಧಿಗಳು, ಪಶುವೈದ್ಯ, ಸಮಾಜ ಕಲ್ಯಾಣ, ಹಿಂದುಳಿದ ವರ್ಗ, ಪರಿಶಿಷ್ಟ ಕಲ್ಯಾಣ, ತೋಟಗಾರಿಕೆ, ಸರ್ಕಾರಿ ಪದವಿ ಪೂರ್ವ ಕಾಲೇಜು, ಎಚ್ಪಿಪಿಸಿ ಪ್ರಥಮ ದರ್ಜೆ ಕಾಲೇಜು, ತಾಲ್ಲೂಕು ಗೊಲ್ಲರ ಸಂಘ, ಗೊಲ್ಲ ನೌಕರರ ಸಂಘ ಶಾಸಕರನ್ನು ಗೌರವಿಸಿದರು.
ಈ ಸಂದರ್ಭದಲ್ಲಿ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಟಿ.ರಘುಮೂರ್ತಿ ಮಾರ್ಚ್ ೨೯ಕ್ಕೆ ವಿಧಾನಸಭೆ ಚುನಾವಣೆ ಘೋಷಣೆಯಾಯಿತು. ಮೇ.೧೦ರ ತನಕ ನಮ್ಮ ಪಕ್ಷದ ಎಲ್ಲಾ ಹಂತದ ಕಾರ್ಯಕರ್ತರು ಹಗಲಿರು ನನ್ನಜೊತೆಗೆ ಹೆಜ್ಜೆ ಹಾಕಿ ಜಯತಂದುಕೊಡಲು ಕಾರಣರಾಗಿದ್ದಾರೆ. ಕಾಂಗ್ರೆಸ್ ಪಕ್ಷ ಮಾತ್ರ ಬಡವರಿಗೆ ನ್ಯಾಯ ಒದಗಿಸುತ್ತದೆ ಎಂಬುದನ್ನು ಈ ಚುನಾವಣೆಯ ಗೆಲುವಿನಿಂದ ಸಾಬೀತಾಗಿದೆ ಎಂದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಿ.ಪಿ.ಪ್ರಕಾಶ್ಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ವೀರಭದ್ರಪ್ಪ, ಸಿ.ಟಿ.ಶ್ರೀನಿವಾಸ್, ಡಿ.ಕೆ.ಕಾಟಯ್ಯ, ಹೂವಿನ ಶ್ರೀನಿವಾಸ್, ಬಡಗಿಪಾಪಣ್ಣ, ಸಿದ್ದಾಪುರಮಂಜಣ್ಣ, ನಿಸರ್ಗಗೋವಿಂದರಾಜು, ವೈ.ಕಾಂತರಾಜು, ಬೊಪ್ಪಣ್ಣ ಮುಂತಾದವರು ಉಪಸ್ಥಿತರಿದ್ದರು.