i
ತೋಟಗಾರಿಕೆ ಬೆಳೆಗಳಿಗೆ ಸಹಾಯಧನಕ್ಕಾಗಿ ರೈತರಿಂದ ಅರ್ಜಿ ಆಹ್ವಾನ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2023-24ನೇ ಸಾಲಿನ ಆರ್ಥಿಕ ವರ್ಷಕ್ಕೆ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ಬೆಳೆಗಳಿಗೆ (ಅಡಿಕೆ ಬೆಳೆ ಹೊರತುಪಡಿಸಿ) ಹನಿನೀರಾವರಿ ಅಳವಡಿಸಿಕೊಳ್ಳಲು ಇಚ್ಚಿಸುವ ಹಾಗೂ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಸವಲತ್ತು ಹೊಂದಿರುವ ತೋಟಗಾರಿಕೆ ಬೆಳೆ ಬೆಳೆಯುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಆಸಕ್ತ ಫಲಾನುಭವಿಗಳಿಗೆ ಇಲಾಖೆ ವತಿಯಿಂದ ಶೇ.90 ರಷ್ಟು ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಈಗಾಗಲೇ ಹನಿ ನೀರಾವರಿಗೆ ಸಹಾಯಧನ ಪಡೆದಿದ್ದು, 7 ವರ್ಷಗಳು ಪೂರ್ಣಗೊಂಡಿದ್ದಲ್ಲಿ ಮತ್ತೋಮ್ಮೆ ಅದೇ ಜಮೀನಿಗೆ ಹೊಸದಾಗಿ ಸಹಾಯಧನ ಪಡೆಯಲು ಅವಕಾಶವಿರುವುದರಿಂದ ಆಸಕ್ತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತ ಫಲಾನುಭವಿಗಳು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ತೋಟಗಾರಿಕೆ ಅಧಿಕಾರಿಗಳಾದ ಎನ್.ಎಂ. ಮೇಘನ (ಕಸಬಾ-1) 8296763058, ಎಸ್.ಎಂ.ಹರೀಶ (ಕಸಬಾ-2) 7065079256, ಎಂ.ಆರ್.ಪೂಜಾ(ಭರಮಸಾಗರ)8105891565,ಹೆಚ್.ತಿಪ್ಪೇಸ್ವಾಮಿ(ಹಿರೇಗುಂಟನೂರು)9902227011, ಜೀತೇಂದ್ರ ಚೌವ್ಹಣ್ (ತುರುವನೂರು) 6362645646 ಗೆ ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.