i
ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ…
ಚಂದ್ರವಳ್ಳಿ ನ್ಯೂಸ್, ಉಡುಪಿ:
ವಿದ್ಯಾರ್ಥಿಯ ಓರ್ವ ಕಾಲೇಜು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ.
ಅಲೈಯ್ಡ್ ಹೆಲ್ತ್ ವಿಭಾಗದ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿ ಬಿಹಾರ ಮೂಲದ ಸತ್ಯಂ ಸುಮನ್(20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಪರೀಕ್ಷಾ ಭೀತಿಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಅಂತ ಶಂಕಿಸಲಾಗದೆ. ಕಾಲೇಜು ಕಟ್ಟಡದ ಒಳಗಿನ ಸಿಸಿಟಿವಿಯಲ್ಲಿ ಘಟನೆಯ ದೃಶ್ಯ ಸೆರೆಯಯಾಗಿದೆ. ಆತ್ಮಹತ್ಯೆಯ ದೃಶ್ಯ ನೋಡಿದ ವಿದ್ಯಾರ್ಥಿಗಳು ಗಲಿಬಿಲಿಗೊಳ್ಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿದ್ಯಾರ್ಥಿ ಬಿದ್ದೊಡನೆ ಸ್ಥಳದಲ್ಲಿದ್ದವರು ಓಡುವ ದೃಶ್ಯ ಕೂಡ ಸೆರೆಯಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಏನೆಂದು ತಿಳಿದುಬಂದಿಲ್ಲ. ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದಿದ್ದು ಮಣಿಪಾಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ಕಾರಣ ಪೋಲಿಸರ ತನಿಖೆಯಿಂದ ತಿಳಿಯ ಬೇಕಿದೆ.