i
ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾಗಿ ಪ್ರತಾಪ್ ಆಯ್ಕೆ, ಅದ್ದೂರಿ ಸನ್ಮಾನ…
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಕಾರ್ಯದರ್ಶಿಯಾಗಿ ಪ್ರತಾಪ್ .ಆರ್ ಅವರು ಆಯ್ಕೆಯಾದ ಹಿನ್ನೆಲೆಯಲ್ಲಿ ತಾಲೂಕಿನ ತೂಬಗೆರೆ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು ಅದ್ದೂರಿಯಾಗಿ ಸನ್ಮಾನ ಮಾಡಿದರು.
ಈ ವೇಳೆ ನೂತನ ಜಿಲ್ಲಾ ಕಾರ್ಯದರ್ಶಿ ಪ್ರತಾಪ್ ಮಾತನಾಡಿ ದೇವನಹಳ್ಳಿ ವಿಧಾನ ಸಭಾ ಕ್ಷೇತ್ರಕ್ಕೆ ಸೇರಿದ ಹೋಬಳಿಯಲ್ಲಿ 58 ಬೂತ್ ಗಳಲ್ಲಿ ಬಿಜೆಪಿ ಗೆ ಮುನ್ನಡೆ ಕಾಯ್ದುಕೊಳ್ಳಲು ಅಗತ್ಯವಾದ ರೀತಿಯಲ್ಲಿ ಪ್ರಚಾರ ಕಾರ್ಯ ನಡೆಸಿದ್ದೆವೆ. ಮನೆ ಮನೆಗೆ ತೆರಳಿ ಕರಪತ್ರ ಹಂಚಿ ಬಿಜೆಪಿ ಕೇಂದ್ರ ಸರ್ಕಾರದ ಸಾಧನೆಗಳನ್ನು ಮತದಾರರಿಗೆ ತಿಳಿಸಿದ್ದೆವೆ.
ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಹಲವಾರು ಆಕಾಂಕ್ಷಿಗಳು ಟಿಕೆಟ್ ಪಡೆಯಲು ಪೈಪೋಟಿ ನಡೆಸುತ್ತಿದ್ದಾರೆ.ಅದರಲ್ಲಿ ಉತ್ತಮವಾದ ಅಭ್ಯರ್ಥಿಯನ್ನು ಇಂದು ಹೈಕಮಾಂಡ್ ಘೋಷಣೆ ಮಾಡಲಿದ್ದಾರೆ.
ಪಕ್ಷ ಘೋಷಣೆ ಮಾಡಿದ ಅಭ್ಯರ್ಥಿ ಪರ ನಾವು ಹಗಲು ರಾತ್ರಿ ಕೆಲಸ ಮಾಡಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ ನರೇಂದ್ರ ಮೋದಿಯವರ ಕೈ ಬಲಪಡಿಸುತ್ತೇವೆ. ದೇಶಕ್ಕೆ ನರೇಂದ್ರ ಮೋದಿಯವರ ನಾಯಕತ್ವ ಅವಶ್ಯಕತೆ ಇದೆ. ಮೋದಿಯವರ ಆಡಳಿತ ಮೆಚ್ಚಿ ಗಲ್ಲಿ ಗಲ್ಲಿಗಳಲ್ಲಿ ಕಾರ್ಯಕರ್ತರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ತಿಳಿಸಿದರು.
ಗ್ರಾಮ ಪಂಚಾಯ್ತಿ ಸದಸ್ಯ ವಾಸುದೇವ್ ಮಾತನಾಡಿ 10 ವರ್ಷದಿಂದ ಬಿಜೆಪಿ ಕಾರ್ಯಕರ್ತನಾಗಿ ನಿಷ್ಟೆಯಿಂದ ಪಕ್ಷದ ಬೆಳವಣಿಗೆಗೆ ಕೆಲಸ ಮಾಡಿದ್ದೇವೆ. ಪ್ರತಾಪ್ ಅವರನ್ನು ಜಿಲ್ಲಾ ಕಾರ್ಯದರ್ಶಿಯನ್ನಾಗಿ ಬಿಜೆಪಿ ಪಕ್ಷ ಆಯ್ಕೆ ಮಾಡಿರುವುದಕ್ಕೆ ನಮಗೆ ಸಂತೋಷವಾಗಿದೆ.
ತೂಬಗೆರೆ ಹೋಬಳಿಯಲ್ಲಿ ಪ್ರತಾಪ್ ಅವರ ನಾಯಕತ್ವ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿದೆ. ಬಡವರಿಗೆ ಅನ್ಯಾಯವಾದರೆ ನ್ಯಾಯ ಕೊಡಿಸುವಲ್ಲಿ ಪ್ರತಾಪ್ ಮುಂಚೂಣಿಯಲ್ಲಿರುತ್ತಾರೆ.ಮುಂದಿನ ದಿನಗಳಲ್ಲಿ ಪ್ರತಾಪ್ ಅವರಿಗೆ ದೊಡ್ಡ ಹುದ್ದೆ ಸಿಗಲಿ ಎಂದು ಹೇಳಿದರು.
ಈ ಸಂಧರ್ಭದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯ ಕೃಷ್ಣಪ್ಪ ( ಕಿಟ್ಟಿ),ಬಿಜೆಪಿ ಮುಖಂಡರಾದ ಮುನಿಕೃಷ್ಣಪ್ಪ,ಚಿಕ್ಕಪಿಳ್ಳಪ್ಪ, ಸುರೇಶ್,ಶರತ್ , ವಕೀಲರಾದ ಅರುಣ್, ನಾರಯಣಸ್ವಾಮಿ, ಪುಟ್ಟರಾಜು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.