Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕನ್ನಡ ಸಾಹಿತ್ಯ ಪರಿಷತ್ತು ಕಬ್ಜ ಆಗಲು ಬಿಡುವುದಿಲ್ಲ: ಪ್ರೊ.ಎಸ್.ಜಿ ಸಿದ್ದರಾಮಯ್ಯ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ : 
ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಒಂದು ಪಕ್ಷದ ಮುಖವಾಣಿಯಾಗಿ ಹೆಜ್ಜೆಯಿಟ್ಟಾಗ ಪ್ರತಿಭಟಿಸಿದ್ದೇವೆ. ಪರಿಷತ್ತು ಯಾವುದೇ ಒಂದು ರಾಜಕೀಯ ಪಕ್ಷದ ಕಬ್ಜ ಆಗಬಾರದೆನ್ನುವ ಕಾರಣಕ್ಕಾಗಿ ಹೋರಾಟಗಾರರು ಸಾಹಿತ್ಯ ಮನಸ್ಸುಳ್ಳ ಜಾಣಗೆರೆ ವೆಂಕಟರಾಮಯ್ಯನವರು ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆಂದು ಕನ್ನಡ ಅಭಿವೃದ್ದಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಹಾಗೂ ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯನವರು ತಿಳಿಸಿದರು.

ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕ.ಸಾ.ಪ. ಅಧ್ಯಕ್ಷ ಮಹೇಶ್‌ಜೋಶಿ ಅಧಿಕಾರವಧಿಯಲ್ಲಿ ಅಧಿಕಾರಿಗಳು ಪರಿಷತ್‌ಗೆ ಬಂದು ವಿಶ್ರಾಂತಿ ಪಡೆಯುವಂತಾಗಿತ್ತು. ಇದರಿಂದ ಮೂಲ ಆಶಯಕ್ಕೆ ಭಂಗವಾಯಿತು. ಬೈಲಾ ತಿದ್ದುಪಡಿ ಮಾಡಿ ಮೂರು ವರ್ಷವಿದ್ದ ಅಧಿಕಾರವಧಿಯನ್ನು ಆರು ವರ್ಷಕ್ಕೆ ಹೆಚ್ಚಿಸಿಕೊಂಡರು. ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಸ್ಥಾಪಿಸಿದ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ವೇದಿಕೆಯನ್ನು ಅರಮನೆಯ ತಮಟೆಯನ್ನಾಗಿ ಮಾಡಿಕೊಂಡು ಅಧಿಕಾರ ದುರುಪಯೋಗಪಡಿಸಿಕೊಂಡ ಪರಿಣಾಮ ಈಗ ಅಮಾನತ್ತುಗೊಂಡಿದ್ದಾರೆಂದರು.

ಮಹೇಶ್‌ಜೋಶಿ ಕಸಾಪ. ಅಧ್ಯಕ್ಷರಾದ ಮೇಲೆ ದ್ವಾರದಲ್ಲಿದ್ದ ಕನ್ನಡದ ಕಮಾನು ಕಿತ್ತು ಕನ್ನಡಿಗರಿಗೆ ಕರ್ನಾಟಕಕ್ಕೆ ಅವಮಾನ ಮಾಡಿದ್ದಾರೆ. ಒಡೆಯರ್ ಪುತ್ಥಳಿ ತೆಗೆದು ಹಾಕಿ ಹೊರಗೆ ಇಡಲಾಗಿದೆ. ಇದು ಆರೋಗ್ಯಕರ ಬೆಳವಣಿಗೆಯಲ್ಲ. ಕಸಾಪ. ಭವಿಷ್ಯವನ್ನು ನಾಶಪಡಿಸಲಾಗಿದೆ. ಸದಸ್ಯತ್ವಗಳನ್ನು ಕಿತ್ತು ಹಾಕುವ ಮೂಲಕ ಸರ್ವಾಧಿಕಾರಿಯಂತೆ ವರ್ತಿಸಿದ ಅವರು ಮತ್ತೆ ಕಸಾಪ.ಗೆ ಕಾಲಿಡಬಾರದೆನ್ನುವ ಕಾರಣಕ್ಕಾಗಿ ಜಾಣಗೆರೆ ವೆಂಕಟರಾಮಯ್ಯನವರನ್ನು ಅಧ್ಯಕ್ಷ ಸ್ಥಾನಕ್ಕೆ ಕೂರಿಸುವ ಪ್ರಯತ್ನ ಮಾಡುತ್ತಿದ್ದೇವೆಂದರು.

ಅಭ್ಯರ್ಥಿ ಜಾಣಗೆರೆ ವೆಂಕಟರಾಮಯ್ಯ ಮಾತನಾಡಿ ೨೦೨೫ ರಲ್ಲಿ ಹೋರಾಟವನ್ನು ಕೈಗೆತ್ತಿಕೊಂಡು ಅದ್ವಾನ, ಅನಾಹುತವಾಗುತ್ತಿದ್ದ ಕನ್ನಡ ಸಾಹಿತ್ಯ ಪರಿಷತ್‌ನ್ನು ಉಳಿಸಿದ್ದೇವೆ. ಇಲ್ಲದಿದ್ದರೆ ದಿಕ್ಕು ತಪ್ಪಿಸುವ ದಾರಿಗೆ ತೆಗೆದುಕೊಂಡು ಹೋಗುತ್ತಿದ್ದರು. ಮಹೇಶ್‌ಜೋಶಿರವರ ಮೂರುವರೆ ವರ್ಷದ ಅಧಿಕಾರವಧಿಯಲ್ಲಿ ಅಕ್ರಮ, ಅನ್ಯಾಯ ಲೂಟಿ ನಡೆದಿರುವ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದ್ದು, ಅಮಾನತ್ತುಗೊಂಡಿರುವ ಅವರ ಅಜೀವ ಸದಸ್ಯತ್ವವೇ ವಜಾ ಆಗುವ ಸಂಭವವಿದೆ. ಅವರಿಂದ ಹಣ ವಸೂಲಿ ಮಾಡಿ ಶಿಕ್ಷೆಗೊಳಪಡಿಸಬೇಕೆಂದು ಒತ್ತಾಯ ಎಂದರು.

ನವೆಂಬರ್‌ನಲ್ಲಿ ಪರಿಷತ್‌ನ ಅವಧಿ ಮುಗಿಯುತ್ತದೆ. ಡಿಸೆಂಬರ್‌ನಲ್ಲಿ ಚುನಾವಣೆ ಘೋಷಣೆಯಾಗಲಿರುವುದರಿಂದ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಪರಿಷತ್‌ನ ಸದಸ್ಯರುಗಳನ್ನು ಭೇಟಿಯಾಗಿ ಈ ಬಾರಿಯ ಚುನಾವಣೆಯಲ್ಲಿ ಗೆಲ್ಲಿಸುವಂತೆ ಮನವಿ ಮಾಡಲಿದ್ದೇವೆಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ ನಿವೃತ್ತ ಅಧಿಕಾರಿಗಳ ತಂಗುದಾಣವಾಗಬಾರದೆಂದರೆ ಇದು ನಮಗೆ ಸವಾಲಿನ ಚುನಾವಣೆಯಾಗಲಿದೆ. ಸಾಹಿತ್ಯ ಚಟುವಟಿಕೆಗಳು ನಿಂತಿವೆ.

ಅನ್ಯಾಯ, ಅಕ್ರಮಗಳನ್ನು ತಪ್ಪಿಸಿ ಕೊಳೆತು ನಾರುತ್ತಿರುವ ವಾತಾವರಣವನ್ನು ಶುಚಿಗೊಳಿಸಬೇಕಿರುವುದರಿಂದ. ಚಿತ್ರದುರ್ಗದಿಂದ ಉತ್ತರ ಕರ್ನಾಟಕದವರೆಗೆ ಸಂಚರಿಸಿ ಹಿಂದಿನ ಅಧ್ಯಕ್ಷರ ಅಕ್ರಮಗಳ ಕುರಿತು ಮತದಾರರಿಗೆ ಮನವರಿಕೆ ಮಾಡಲಾಗುವುದೆಂದರು.

ತ.ರಾ.ಸು. ಹುಲ್ಲೂರು ಶ್ರೀನಿವಾಸ ಜೋಯಿಸ್, ಡಾ.ಬಿ.ಎಲ್.ವೇಣು, ಡಾ.ಬಿ.ರಾಜಶೇಖರಪ್ಪನವರಂತ ದಿಗ್ಗಜ್ಜರ ನೆಲ ಚಿತ್ರದುರ್ಗದಿಂದ ಪ್ರವಾಸ ಕೈಗೊಂಡಿದ್ದೇವೆ. ಮಹೇಶ್‌ಜೋಶಿ ತಮ್ಮ ಅನುಕೂಲಕ್ಕೆ ತಕ್ಕಂತೆ ಬೈಲಾ ತಿದ್ದುಪಡಿ ಮಾಡಿ ನಾಲ್ಕು ಸರ್ವ ಸದಸ್ಯರ ಸಭೆ ನಡೆಸುವುದನ್ನು ತಪ್ಪಿಸಿ ಪರಿಷತ್‌ನ್ನು ಉಳಿಸಿ ದುಷ್ಠಶಕ್ತಿಗಳಿಂದ ಕನ್ನಡ ಸಾಹಿತ್ಯ ಪರಿಷತ್‌ನ್ನು ಪಾರು ಮಾಡಿದ್ದೇವೆ. ಮುಂದೆ ನಮ್ಮದು ಕಾನೂನು ಹೋರಾಟ ಎಂದು ಹೇಳಿದರು.

ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿದರೆ ಕನ್ನಡದ ಪ್ರಮುಖ ಕೃತಿಗಳನ್ನು ಪ್ರಕಟಿಸಿ ಕನ್ನಡಿಗರ ಕೈಗೆ ಅರ್ಪಿಸಿ ಕನ್ನಡಿಗರ ಹೆಮ್ಮೆಯ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ತಿಂಗಳಿಗೊಮ್ಮೆ ಪುಸ್ತಕ ಸಂತೆ ಏರ್ಪಡಿಸುತ್ತೇವೆ. ಇದಕ್ಕೆ ನಿಮ್ಮೆಲ್ಲರ ಸಹಕಾರ ಮುಖ್ಯ ಎಂದು ಸದಸ್ಯರುಗಳಲ್ಲಿ ವಿನಂತಿಸಿದರು.

ಆರ್.ಜಿ.ಹಳ್ಳಿ ನಾಗರಾಜ್ ಮಾತನಾಡುತ್ತ ೧೧೨ ವರ್ಷಗಳ ಇತಿಹಾಸವುಳ್ಳ ಕನ್ನಡ ಸಾಹಿತ್ಯ ಪರಿಷತ್ ಹನ್ನೆರಡು ವರ್ಷಗಳಿಂದ ಬೇರೆ ಬೇರೆ ಆಯಾಮಗಳನ್ನು ಪಡೆದುಕೊಂಡಿದೆ. ಅಧ್ಯಕ್ಷ ಮಹೇಶ್ ಜೋಶಿ ಸರ್ವಾಧಿಕಾರಿಯಂತೆ ವರ್ತಿಸಿ ದರ್ಪ ತೋರುತ್ತಿದ್ದಾರೆ. ನಮಗೆ ಅನೇಕ ತಪ್ಪುಗಳು ಸಿಕ್ಕಿವೆ. ಪರಿಷತ್‌ನ ಘನತೆ ಗೌರವ ಉಳಿಸಬೇಕಾಗಿರುವುದರಿಂದ ಜಾಣಗೆರೆ ವೆಂಕಟರಾಮಯ್ಯನವರನ್ನು ಕಸಾಪ. ಚುನಾವಣೆಯಲ್ಲಿ ಗೆಲ್ಲಿಸುವ ಜವಾಬ್ದಾರಿ ಸದಸ್ಯರುಗಳ ಮೇಲಿದೆ ಎಂದು ನುಡಿದರು.

ಎರಡು ಅವಧಿಯಲ್ಲಿ ಅಧಿಕಾರಿಗಳು ಪರಿಷತ್‌ಗೆ ಬಂದು ದರ್ಪ ದೌರ್ಜನ್ಯ ತೋರಿದ್ದಾರೆಂದರೆ ಅದಕ್ಕೆ ಮಹೇಶ್‌ಜೋಶಿ ಕುಮ್ಮಕ್ಕು ಕಾರಣ. ಏಳು ಕೋಟಿ ೪೮ ಲಕ್ಷ ರೂ. ದುರುಪಯೋಗವಾಗಿದೆ. ಅದಕ್ಕಾಗಿ ಮುಂದಿನ ರಾಜ್ಯಾಧ್ಯಕ್ಷರನ್ನಾಗಿ ಜಾಣಗೆರೆ ವೆಂಕಟರಾಮಯ್ಯನವರನ್ನು ಬಿಂಬಿಸಲಾಗುತ್ತಿದೆ. ಗೋಕಾಕ್ ಚಳುವಳಿಯಿಂದ ಹಿಡಿದು ಗಡಿ ಸಮಸ್ಯೆ, ನದಿ ನೀರಿನ ವಿಚಾರವಾಗಿ ಹೋರಾಡಿರುವ ಅವರ ಪರ ರಾಜ್ಯಾದ್ಯಂತ ಪ್ರಚಾರ ನಡೆಸುತ್ತೇವೆಂದು ಹೇಳಿದರು.

ಪ್ರೊ.ಸಿ.ಕೆ.ಮಹೇಶ್ ಮಾತನಾಡಿ ಬ್ರಾಹ್ಮಣ್ಯರ ರಾಷ್ಟ್ರವಾಗಿ ಭಾರತ ಪರಿವರ್ತನೆಯಾಗುತ್ತಿದೆ. ಎಲ್ಲರ ಬದುಕು ನಾಶವಾಗುತ್ತಿರುವುದನ್ನು ನೋಡಿಕೊಂಡು ಸುಮ್ಮನಿರಬೇಕಾದಂತ ವಾತಾವರಣ ನಿರ್ಮಾಣವಾಗಿದೆ. ಸಾಹಿತ್ಯ ಜಂಗಮ, ಜಡತ್ವವನ್ನು ಹೊಂದಿದೆ. ಪಂಪನ ವಾಕ್ಯವುಳ್ಳ ಕಮಾನನ್ನು ಮಹೇಶ್‌ಜೋಶಿ ತೆಗೆದು ಹಾಕಿ ಕನ್ನಡಕ್ಕೆ ಅಗೌರವ ತೋರಿರುವುದು ಸಂವಿಧಾನದ ಆಶಯಕ್ಕೆ ಧಕ್ಕೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ನಿವೃತ್ತ ಪ್ರಾಚಾರ್ಯರಾದ ಡಾ.ಕರಿಯಪ್ಪ ಮಾಳಿಗೆ, ಪ್ರೊ.ಹೆಚ್.ಲಿಂಗಪ್ಪ, ಚಿತ್ತಯ್ಯ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆತ್ರೇಯ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳಿಗೆ ಅತಂತ್ರ ಸ್ಥಿತಿಸಹಬಾಳ್ವೆ ಮತ್ತು ಸಾಮಾಜಿಕ ಸಾಮರಸ್ಯವೇ ನಮ್ಮ ನಾಡಿನ ಶಕ್ತಿ: ಟಿ.ರಘುಮೂರ್ತಿಅದ್ಧೂರಿಯಾಗಿ ನಡೆದ ಈದ್‌ಮಿಲಾದ್ ಮೆರವಣಿಗೆ  ಹೋರಾಟಗಾರ ಎನ್.ಎಸ್.ಹರ್ಡೆಕರ್‌ರವರಲ್ಲಿ ಶಿಸ್ತು, ದೇಶಭಕ್ತಿ ಎದ್ದು ಕಾಣುತ್ತಿತ್ತು‘ರಸ್ತೆ ರಾಜ’ನ ಕ್ಷೇತ್ರದಲ್ಲಿ ಗುಂಡಿಗಳದ್ದೇ ಸಾಮ್ರಾಜ್ಯ: ಅನುದಾನದ ಹೊಳೆಯಿದ್ದರೂ ತಪ್ಪದ ಯಮಯಾತನೆ!ಕನ್ನಡ ಸಾಹಿತ್ಯ ಪರಿಷತ್ತು ಕಬ್ಜ ಆಗಲು ಬಿಡುವುದಿಲ್ಲ: ಪ್ರೊ.ಎಸ್.ಜಿ ಸಿದ್ದರಾಮಯ್ಯಚಿಕ್ಕಂದವಾಡಿ ಗ್ರಾಮದ ರೇವಜ್ಜರ ಓಂಕಾರಪ್ಪ ಇನ್ನಿಲ್ಲಧರ್ಮಪುರ ಭಾಗದಲ್ಲಿ ಕೌಂಟ್ ಇಲ್ಲದ ಬಾಲಕೃಷ್ಣ: ಮಾಜಿ ಜಿಪಂ ಉಪಾಧ್ಯಕ್ಷ ದ್ಯಾಮೇಗೌಡ ವಾಗ್ದಾಳಿಅದ್ದೂರಿ ಚಾಲನೆ ಪಡೆದ ಯಶ್ ಅಭಿನಯದ 'ಟಾಕ್ಸಿಕ್': ಬಾಕ್ಸ್ ಆಫೀಸ್‌ನಲ್ಲಿ 100 ಕೋಟಿಯತ್ತ ಭರ್ಜರಿ ಮುನ್ನೋಟ!ಮೈಸೂರು ದಸರಾ: ಗಜಪಯಣಕ್ಕೆ ಚಾಲನೆ, ‘ಕೂಂಬಿಂಗ್ ಕಿಂಗ್’ ಅಭಿಮನ್ಯುವಿಗೆ ಭಾವಪೂರ್ಣ ಬೀಳ್ಕೊಡುಗೆ