Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ನೃತ್ಯ ಭಾರತೀಯ ಸಂಸ್ಕೃತಿಯ ಜೀವಂತ ಅಭಿವ್ಯಕ್ತಿ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭರತನಾಟ್ಯವು ಕೇವಲ ಮನರಂಜನೆಯ ಕಲೆಯಲ್ಲ, ಅದು ಭಾರತೀಯ ಸಂಸ್ಕೃತಿ, ಭಕ್ತಿ, ಶಿಸ್ತು ಮತ್ತು ಆತ್ಮಸಾಧನೆಯ ಜೀವಂತ ಅಭಿವ್ಯಕ್ತಿಯಾಗಿದೆ ಎಂದು ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಹೇಳಿದರು.

ಸಂಜಯನಗರದ ರಮಣ ಮಹರ್ಷಿ ಹೆರಿಟೇಜ್ ಆಡಿಟೋರಿಯಂನಲ್ಲಿ ವಿದುಷಿ ಅನುಶ್ರುತಾ ಬಿ.ವೈ. ಅವರ ‘ದಶಬ್ದಿ’ ಭರತನಾಟ್ಯೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಗುರು-ಶಿಷ್ಯ ಪರಂಪರೆಯೇ ಭಾರತೀಯ ಶಾಸ್ತ್ರೀಯ ಕಲೆಯ ಜೀವಾಳವಾಗಿದೆ. ಗುರುಗಳ ಮಾರ್ಗದರ್ಶನದಲ್ಲಿ ಸಾಧನೆ ಮಾಡುವ ವಿದ್ಯಾರ್ಥಿಗಳು ಕೇವಲ ಉತ್ತಮ ಕಲಾವಿದರಾಗುವುದಲ್ಲ, ಉತ್ತಮ ವ್ಯಕ್ತಿತ್ವವನ್ನೂ ರೂಪಿಸಿಕೊಳ್ಳುತ್ತಾರೆ ಎಂದು ತಿಳಿಸಿದರು.

ಇಂದಿನ ತಂತ್ರಜ್ಞಾನ ಯುಗದಲ್ಲಿ ಯುವಜನರು ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯಿಂದ ದೂರವಾಗುತ್ತಿರುವ ಸಂದರ್ಭದಲ್ಲಿ, ಭರತನಾಟ್ಯದಂತಹ ಶಾಸ್ತ್ರೀಯ ಕಲೆಗಳು ನಮ್ಮ ಸಂಸ್ಕೃತಿಯ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಸೇತುವೆಯಾಗಿವೆ ಎಂದು ಹೇಳಿದರು. ಕಲೆಯ ಮೂಲಕ ಭಕ್ತಿ, ಶಿಸ್ತು, ಸಹನೆ ಮತ್ತು ಸಮರ್ಪಣೆಯಂತಹ ಜೀವನ ಮೌಲ್ಯಗಳು ಬೆಳೆಸಲ್ಪಡುತ್ತವೆ ಎಂದು ಅಭಿಪ್ರಾಯಪಟ್ಟರು.

ವಿದುಷಿ ಅನುಶ್ರುತಾ ಬಿ.ವೈ. ಅವರು ಕಳೆದ ಹತ್ತು ವರ್ಷಗಳಿಂದ ಭರತನಾಟ್ಯವನ್ನು ಬೋಧಿಸುವ ಮೂಲಕ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳನ್ನು ರೂಪಿಸಿರುವುದು ಶ್ಲಾಘನೀಯ. ಕಲಾವಿದರ ಸಾಧನೆಗೆ ನಿರಂತರ ಪರಿಶ್ರಮ, ಗುರುಭಕ್ತಿ ಮತ್ತು ಕಲೆಯ ಮೇಲಿನ ನಿಷ್ಠೆ ಅಗತ್ಯ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಪ್ರದರ್ಶನ ನೀಡಿದ ಎಲ್ಲ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಸ್ವಾಮೀಜಿ, ಭಾರತೀಯ ಶಾಸ್ತ್ರೀಯ ಕಲೆಗಳನ್ನು ಸಂರಕ್ಷಿಸಿ ಬೆಳೆಸುವ ಕಾರ್ಯದಲ್ಲಿ ಪೋಷಕರು ಹಾಗೂ ಸಮಾಜವೂ ಕೈಜೋಡಿಸಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್, ವಿದುಷಿ ಅನುಶ್ರುತಾ ಹಾಗೂ ಖ್ಯಾತ ನೃತ್ಯಗಾರ್ತಿ ಡಾ. ವಸುಂಧರಾ ದೊರೆಸ್ವಾಮಿ, ಸಂಗೀತ ಮೇಳದಲ್ಲಿ ಗಾನಶ್ರೀ ಗುರುಪ್ರಸಾದ್, ಡಾ.ಹನುಮಂತರಾಜು, ಸಮೃದ್ಧ ಶ್ರೀನಿವಾಸ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಡಾ.ಲಕ್ಷ್ಮಿ ರೇಖಾ ಅರುಣ್ ನಿರೂಪಿಸಿದರು.
 

Advertisement

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೃತ್ಯ ಭಾರತೀಯ ಸಂಸ್ಕೃತಿಯ ಜೀವಂತ ಅಭಿವ್ಯಕ್ತಿ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿನೇಪಾಳ ಪ್ರವಾಹ: ನೆರವು ನಿರಾಕರಿಸಿದ ನೇಪಾಳ; ಭಾರತದಿಂದ ಬೃಹತ್ ಮಾನವೀಯ ಸಹಾಯ'ನಥಿಂಗ್ ನೈಸ್' ಅಭಿಯಾನಕ್ಕೆ ಚಾಲನೆ: ಸರ್ಕಾರವೇ ರಸ್ತೆ ಸ್ವಾಧೀನಪಡಿಸಿಕೊಳ್ಳಲಿ - ನಿಖಿಲ್ ಕುಮಾರಸ್ವಾಮಿ ಆಗ್ರಹಎಇಇ ನೇಮಕಾತಿ ಹಗರಣ: ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ, ದಾಖಲೆ ಬಿಡುಗಡೆಮಧ್ಯರಾತ್ರಿ ಪೊಲೀಸರ ಫೈರಿಂಗ್: ರೌಡಿಶೀಟರ್ ಜಿಶಾನ್ ಕಾಲಿಗೆ ಗುಂಡುಮುಡಾ ಹಗರಣ: 50:50 ಅನುಪಾತದ 1,100ಕ್ಕೂ ಹೆಚ್ಚಿನ ಸೈಟುಗಳು ರದ್ದು –ಸಚಿವ ಯತೀಂದ್ರನೇಪಾಳದ ದಿಢೀರ್ ಪ್ರವಾಹ: ಬಲಿ ಸಂಖ್ಯೆ 538ಕ್ಕೆ ಏರಿಕೆ, 320ಕ್ಕೂ ಹೆಚ್ಚು ಭಾರತೀಯ ಪ್ರವಾಸಿಗರು ನಾಪತ್ತೆಭದ್ರತೆಗೆ ಮಹತ್ವದ ಹೆಜ್ಜೆ: ಪೋಲಿಸರಿಗೆ ಎನ್‌ಎಸ್‌ಜಿ ತರಬೇತಿರೈಲ್ವೇ ಚತುಷ್ಪಥ ಯೋಜನೆ: ಕರ್ನಾಟಕಕ್ಕೆ ಕೇಂದ್ರದ ಮಲತಾಯಿ ಧೋರಣೆ - ಸಚಿವ ಎಂ.ಬಿ. ಪಾಟೀಲ್ ಆಕ್ರೋಶಪೊಲೀಸರಿಗೆ ಹಲ್ಲೆಗೆ ಯತ್ನಿಸಿದ ರೌಡಿಶೀಟರ್; ಕಾಲಿಗೆ ಗುಂಡು